PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
ಚುನಾವಣೆಬೆಂಗಳೂರುಮುಖಪುಟ

ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ

Prathinidhi News
Last updated: April 19, 2024 11:51 am
Prathinidhi News
Published April 19, 2024
Share
SHARE

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಹುಬ್ಬಳ್ಳಿಯಲ್ಲಿನ ಕಾಂಗ್ರೆಸ್‌ ಕಾರ್ಪೋರೇಟರ್ ಮಗಳು ನೇಹಾ ಹಿರೇಮಠ ಕೊಲೆ ನಡೆದಿದೆ. ಕಿಮ್ಸ್‌ನ ಶಾವಾಗಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಪ್ರಕರಣವನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

Contents
ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲಗೃಹ ಸಚಿವರು ಏನು ಹೇಳುತ್ತಾರೆ?ಪ್ರತಿಭಟನೆಗೆ ಕರೆ: ಬಿಗಿ ಬಂದೋಬಸ್ತ್

ಮೃತ ಯುವತಿ ನೇಹಾ ಹಿರೇಮಠ ಹತ್ಯೆ ಕುರಿತು ಮಾಹಿತಿ ಪಡೆದು ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ನೇಹಾ ಹಿರೇಮಠ ಎಂಬ ಯುವತಿ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾನೂನು ಸುವ್ಯವಸ್ಥಿತ ರಾಜ್ಯದಲ್ಲಿ ಹದೆಗಟ್ಟಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದು ಗೊತ್ತಾಗುತ್ತದೆ.

ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲ

ಮೊನ್ನೆಯಷ್ಟೇ ಐದು ಜನ ಯುವಕರು ಬೈಕ್ ಮೇಲೆ ಹೊಗೋವಾಗ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹ್ಯೇಯ ಘಟನೆ ನಡೆದಿತ್ತು. ಸರ್ಕಾರದ ತುಷ್ಟೀರಣ ನೀತಿ ಕಾರಣದಿಂದ ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲದಂತಾಗಿದೆ. ಇಂತಹ ಘಟನೆಗಳನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.

ನಾನು ಅವರ ಮೃತ ಯುವತಿ ತಂದೆ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರೊಂದಿಗೆ ಮಾತನಾಡಿದ್ದೇನೆ. ಪುತ್ರಿ ನೇಹಾ ಯಾವುದೇ ಪ್ರೀತಿ ಮಾಡಿಲ್ಲ. ಲವ್ ಮಾಡಿದರೆ ಅವರನ್ನು ಕೊಲೆ ಮಾಡಬೇಕು ಎಂದೇನಾದರೂ ಇದಿಯೇ? ಎಂದು ಪ್ರಶ್ನಿಸಿದರು. ಲವ್ ಜಿಹಾದ್ ಬಗ್ಗೆ ಅವರ ತಂದೆಯೇ ಮಾತನಾಡಿದ್ದಾರೆ.

- ಜಾಹೀರಾತು -

ಗೃಹ ಸಚಿವರು ಏನು ಹೇಳುತ್ತಾರೆ?

ಈ ಕೊಲೆ ಪ್ರಕರಣ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅಮಾಯಕ ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಕುರಿತು ರಾಜ್ಯದ ಗೃಹ ಸಚಿವರ ಜಿ.ಪರಮೇಶ್ವರ ಅವರು ಏನು ಉತ್ತರ ಕೊಡುತ್ತಾರೆ? ಎಂದು ಕೇಳಿದರು. ಈ ಹಿಂದೆ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ, ಪ್ರಕರಣ, ಹುಬ್ಬಳ್ಳಿ ಗಲಭೆ ಪ್ರಕರಣಗಳು ನಡೆದಿವೆ. ಹೀಗೆ ಮುಸ್ಲಿಂ ಲೀಗ್ ಧ್ವಜ ಇರಬಹುದು ಎಲ್ಲವೂ ಇಂತವರಿಗೆ ಪ್ರಚೋದನೆ ನೀಡಿದಂತಾಗುತ್ತಿದೆ. ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.

ಯಾರು ವಕೀಲರು ಕೂಡ ಆರೋಪಿ ಪರ ವಕಾಲತ್ತು ವಹಿಸಿಕೊಳ್ಳಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಪ್ರಕರಣವನ್ನ ಲವ್ ಜಿಹಾದ್ ಆಯಾಮದಲ್ಲಿ‌ ತನಿಖೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಗೆ ಕರೆ: ಬಿಗಿ ಬಂದೋಬಸ್ತ್

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಪ್ರಕರಣ ವಿರೋಧಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆಗೆ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿವಿಬಿ ಕಾಲೇಜ್ ನಲ್ಲಿ‌ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿರುವ ಡಿಸಿಪಿ ರಾಜೀವ್ ಅವರ ನೇತೃತ್ವದಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಬಿವಿಬಿ ಕಾಲೇಜು ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಒಂದು ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಿದ್ದಾರೆ. 3 ಸಿಪಿಐ 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ರಾಜೀವ್ ತಿಳಿಸಿದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸನ್ನಿಧಾನ

ಕಾರ್ತಿಕ ಮಾಸದ ಹಿನ್ನೆಲೆ ಬೆಟ್ಟದ ನಂದಿಗೆ ಮಹಾಭೀಷೇಕ

November 18, 2024
ದಸರಾ ಮಹೋತ್ಸವಮುಖಪುಟಮೈಸೂರು ನಗರ

ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ – ಮೈಸೂರು ದಸರಾ ಜನರ ಹಬ್ಬ: ಪ್ರವಾಸಿಗರಿಗೆ ಸ್ವಾಗತ ಕೋರಿದಸಿಎಂ ಸಿದ್ದರಾಮಯ್ಯ

October 2, 2025
ಚುನಾವಣೆಮಂಡ್ಯಮುಖಪುಟ

ನಾನು ಮಾಡಿದ ತ್ಯಾಗಕ್ಕೆ ಬೆಲೆಯಿಲ್ಲದಂತಾಯಿತು, ಜೆಡಿಎಸ್ ವರಿಷ್ಠರ ಧೋರಣೆಯಿಂದ ಬಹಳ ಬೇಸರವಾಗಿದೆ: ಸುಮಲತಾ ಅಂಬರೀಶ್

April 26, 2024
ಮುಖಪುಟ

ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ

April 5, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?