ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಹುಬ್ಬಳ್ಳಿಯಲ್ಲಿನ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಹಿರೇಮಠ ಕೊಲೆ ನಡೆದಿದೆ. ಕಿಮ್ಸ್ನ ಶಾವಾಗಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಪ್ರಕರಣವನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಮೃತ ಯುವತಿ ನೇಹಾ ಹಿರೇಮಠ ಹತ್ಯೆ ಕುರಿತು ಮಾಹಿತಿ ಪಡೆದು ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ನೇಹಾ ಹಿರೇಮಠ ಎಂಬ ಯುವತಿ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾನೂನು ಸುವ್ಯವಸ್ಥಿತ ರಾಜ್ಯದಲ್ಲಿ ಹದೆಗಟ್ಟಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದು ಗೊತ್ತಾಗುತ್ತದೆ.
ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲ
ಮೊನ್ನೆಯಷ್ಟೇ ಐದು ಜನ ಯುವಕರು ಬೈಕ್ ಮೇಲೆ ಹೊಗೋವಾಗ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹ್ಯೇಯ ಘಟನೆ ನಡೆದಿತ್ತು. ಸರ್ಕಾರದ ತುಷ್ಟೀರಣ ನೀತಿ ಕಾರಣದಿಂದ ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲದಂತಾಗಿದೆ. ಇಂತಹ ಘಟನೆಗಳನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.
ನಾನು ಅವರ ಮೃತ ಯುವತಿ ತಂದೆ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರೊಂದಿಗೆ ಮಾತನಾಡಿದ್ದೇನೆ. ಪುತ್ರಿ ನೇಹಾ ಯಾವುದೇ ಪ್ರೀತಿ ಮಾಡಿಲ್ಲ. ಲವ್ ಮಾಡಿದರೆ ಅವರನ್ನು ಕೊಲೆ ಮಾಡಬೇಕು ಎಂದೇನಾದರೂ ಇದಿಯೇ? ಎಂದು ಪ್ರಶ್ನಿಸಿದರು. ಲವ್ ಜಿಹಾದ್ ಬಗ್ಗೆ ಅವರ ತಂದೆಯೇ ಮಾತನಾಡಿದ್ದಾರೆ.
ಗೃಹ ಸಚಿವರು ಏನು ಹೇಳುತ್ತಾರೆ?
ಈ ಕೊಲೆ ಪ್ರಕರಣ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅಮಾಯಕ ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಕುರಿತು ರಾಜ್ಯದ ಗೃಹ ಸಚಿವರ ಜಿ.ಪರಮೇಶ್ವರ ಅವರು ಏನು ಉತ್ತರ ಕೊಡುತ್ತಾರೆ? ಎಂದು ಕೇಳಿದರು. ಈ ಹಿಂದೆ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ, ಪ್ರಕರಣ, ಹುಬ್ಬಳ್ಳಿ ಗಲಭೆ ಪ್ರಕರಣಗಳು ನಡೆದಿವೆ. ಹೀಗೆ ಮುಸ್ಲಿಂ ಲೀಗ್ ಧ್ವಜ ಇರಬಹುದು ಎಲ್ಲವೂ ಇಂತವರಿಗೆ ಪ್ರಚೋದನೆ ನೀಡಿದಂತಾಗುತ್ತಿದೆ. ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.
ಯಾರು ವಕೀಲರು ಕೂಡ ಆರೋಪಿ ಪರ ವಕಾಲತ್ತು ವಹಿಸಿಕೊಳ್ಳಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಪ್ರಕರಣವನ್ನ ಲವ್ ಜಿಹಾದ್ ಆಯಾಮದಲ್ಲಿ ತನಿಖೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಗೆ ಕರೆ: ಬಿಗಿ ಬಂದೋಬಸ್ತ್
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಪ್ರಕರಣ ವಿರೋಧಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆಗೆ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿರುವ ಡಿಸಿಪಿ ರಾಜೀವ್ ಅವರ ನೇತೃತ್ವದಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಬಿವಿಬಿ ಕಾಲೇಜು ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಿದ್ದಾರೆ. 3 ಸಿಪಿಐ 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ರಾಜೀವ್ ತಿಳಿಸಿದರು.