PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿ ಬ್ಲ್ಯಾಕ್ ಮೇಲ್ ತಂತ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಹಾಸನ > ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿ ಬ್ಲ್ಯಾಕ್ ಮೇಲ್ ತಂತ್ರ
ಹಾಸನ

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿ ಬ್ಲ್ಯಾಕ್ ಮೇಲ್ ತಂತ್ರ

ಪ್ರತಿನಿಧಿ
Last updated: May 7, 2024 10:08 pm
ಪ್ರತಿನಿಧಿ
Published May 7, 2024
Share
SHARE
  • ಒಕ್ಕಲಿಗರ ಸಂಘದ ಮುಖಂಡ ಬಿ.ಪಿ. ಮಂಜೇಗೌಡ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಕಾಂಗ್ರೆಸ್ ಮುಖಂಡರ ಮೇಲೆ ಗೂಬೆ ಕೂರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಹಾಗೂ ಹಾಸನದ ಕಾಂಗ್ರೆಸ್ ಮುಖಂಡ ಬಿ. ಪಿ. ಮಂಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಪ್ರೆಸ್ ಕ್ಲಬ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಾಜೇಗೌಡರೇ ಪೆನ್ ಡ್ರೈವ್ ಹಂಚಿಕೆಯ ಜನಕ. ಅವರೇ ಇಂತಹ ಷಡ್ಯಂತ್ರ ರೂಪಿಸಿದ್ದು, ಅವರೇ ಹಂಚಿಕೆ ಮಾಡಿದ್ದಾರೆ. ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತು ಎಂಬ ಗಾದೆ ಮಾತು ದೇವರಾಜೇಗೌಡರಿಗೆ ಅನ್ವಯಿಸುತ್ತದೆ. ಮೊದಲು ಪೆನ್ ಡ್ರೈವ್ ಸಿಕ್ಕಿದ್ದು, ಅದನ್ನು ನೋಡಿದ್ದು ಎಲ್ಲದರಲ್ಲೂ ಅವರೇ ಮೊದಲಿಗರು. ಬಿಜೆಪಿ ದೆಹಲಿ ನಾಯಕರು, ರಾಜ್ಯ ಬಿಜೆಪಿ ನಾಯಕರಿಗೆ ಪೆನ್ ಡ್ರೈವ್ ಗಳಿಗೆ ಕಾಪಿ ಮಾಡಿಕೊಂಡು ಸಲ್ಲಿಸಿದ್ದಾರೆ ಎಂದರು.

ಸ್ವತಃ ಬಿಜೆಪಿ ಮುಖಂಡ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ಅವರನ್ನು ಕಣಕ್ಕಿಳಿಸುವುದು ಬೇಡ. ಬೇರೆ ಯಾರಿಗಾದರೂ ಟಿಕೆಟ್ ನೀಡುವಂತೆ ಹೇಳಿದ್ದರು. ಇದನ್ನು ಹಾಸನದ ಬಿಜೆಪಿ ನಾಯಕರು ಜಿಲ್ಲೆಯಾದ್ಯಂತ ಹೇಳಿಕೊಂಡು ತಿರುಗುತ್ತಿದ್ದಾರೆ. ಕುಮಾರಸ್ವಾಮಿ ಅವರು ಸಹ ಇದನ್ನು ಸೂಚ್ಯವಾಗಿ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಪೆನ್ ಡ್ರೈವ್ ಹಂಚಿದ್ದೆಂದು ಅವರ ಮೇಲೆ ಅನಗತ್ಯವಾಗಿ ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಡಿ.ಕೆ. ಶಿವಕುಮಾರ್ ಅವರು ಕರ್ನಾಟಕವಷ್ಟೇ ಅಲ್ಲದೇ ಹಲವು ರಾಜ್ಯಗಳಲ್ಲಿ ಪಕ್ಷದ ಜವಾಬ್ದಾರಿ ನಿಭಾಯಿಸುತ್ತಿದ್ದು, ಎಡೆಬಿಡದೇ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇಂತಹ ನಾಯಕರ ಮೇಲೆ ವೃಥಾ ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ  ಎಂದು ಪ್ರಶ್ನಿಸಿದರು.

ದೇವರಾಜೇಗೌಡರು ಕಟ್ಟುಕಥೆ ಕಟ್ಟಿದ್ದಾರೆ. 2019 ರಿಂದ ಅವರು ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅಶ್ಲೀಲ ಪೆನ್ ಡ್ರೈನ್ ಅನ್ನು ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ನೀಡಿದ್ದಾರೆ. ದೇವರಾಜೇಗೌಡರು ಈ ಅಶ್ಲೀಲ ಪೆನ್ ಡ್ರೈವ್ ಅನ್ನು ಹಾಸನದ ಸರ್ಕಲ್ ನಲ್ಲಿ ಎಲ್.ಇ.ಡಿ ಟಿವಿ ಪರದೆ ಮೇಲೆ ತೋರಿಸುವುದಾಗಿ ಹೇಳಿದ್ದು ಯಾರು ಎಂದು ಬಿ.ಪಿ. ಮಂಜೇಗೌಡ ಖಾರವಾಗಿ ಪ್ರಶ್ನಿಸಿದರು.

- ಜಾಹೀರಾತು -

ತಮಗೆ ಕಾಂಗ್ರೆಸ್ ಮುಖಂಡರು ರಾಜಕೀಯ ಅಧಿಕಾರ ಮತ್ತಿತರ ಆಮೀಷ ಒಡ್ಡಿದ್ದರು ಎಂಬುದು ಸಹ ಶುದ್ದ ಸುಳ್ಳು. ಬಿಜೆಪಿ ನಾಯಕರಿಂದ ಇವರು ಡೀಲ್ ಪಡೆದುಕೊಂಡಿದ್ದಾರೆ. ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಪೆನ್ ಡ್ರೈವ್ ಅನ್ನು ದೇವರಾಜೇಗೌಡರು ನನಗೂ ನೀಡಲು ಬಂದಿದ್ದರು. ಆದರೆ ಅಶ್ಲೀಲ ದೃಶ್ಯ ನೋಡುವುದಿಲ್ಲ ಎಂದು ಹೇಳಿ ಪೆನ್ ಡ್ರೈನ್ ಸ್ವೀಕರಿಸಲಿಲ್ಲ. ಹಾಗಿದ್ದರೆ ಇವರು ಎಷ್ಟು ಪೆನ್ ಡ್ರೈವ್ ಗಳನ್ನು ಕಾಪಿ ಮಾಡಿಕೊಂಡಿದ್ದಾರೆ? ಯಾರು ಯಾರಿಗೆ ಹಂಚಿದ್ದಾರೆ. ಇವೆಲ್ಲಾ ಬಹಿರಂಗವಾಗಬೇಕು. ಎಸ್.ಐ.ಟಿ ಅಧಿಕಾರಿಗಳು ದೇವರಾಜೇಗೌಡರನ್ನು ಬಂಧಿಸಿ ವಿಚಾರಣೆ ನಡೆಸಿದರೆ ಸತ್ಯ ಸಂಗತಿ ಬೆಳಕಿಗೆ ಬರಲಿದೆ ಎಂದು ಬಿ. ಪಿ. ಮಂಜೇಗೌಡ ಒತ್ತಾಯಿಸಿದರು.

###

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಹಾಸನ

ಕೆರೆಗಳ ಒತ್ತುವರಿ ತೆರವುಗೊಳಿಸಲು ಸೂಚನೆ

August 6, 2024
ಹಾಸನ

9ರಂದು ಶ್ರೀ ಸ್ವರ್ಣಗೌರಮ್ಮ ನೂತನ ದೇವಾಲಯ ಶಂಕುಸ್ಥಾಪನೆ

August 7, 2024
ಹಾಸನ

ಫಲಿತಾಂಶ ಉತ್ತಮ ಪಡಿಸಲು ಅಗತ್ಯಕ್ರಮ

June 22, 2024
ಮುಖಪುಟಹಾಸನ

ಹಾಸನದಲ್ಲಿ ಭೀಕರ ರಸ್ತೆ ಅಪಘಾತ : 9 ಜೀವಗಳು ಟ್ರಕ್‌ ಗೆ ಬಲಿ..!

September 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?