PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಾಂಗ್ರೆಸ್ ಶಾಸಕರಿಗೇ ಅವರ ಸರ್ಕಾರದ ಬಗ್ಗೆ ರೋಸಿ ಹೋಗಿದೆ: ಪ್ರಲ್ಹಾದ್ ಜೋಶಿ ವಾಗ್ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಕಾಂಗ್ರೆಸ್ ಶಾಸಕರಿಗೇ ಅವರ ಸರ್ಕಾರದ ಬಗ್ಗೆ ರೋಸಿ ಹೋಗಿದೆ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್ ಶಾಸಕರಿಗೇ ಅವರ ಸರ್ಕಾರದ ಬಗ್ಗೆ ರೋಸಿ ಹೋಗಿದೆ: ಪ್ರಲ್ಹಾದ್ ಜೋಶಿ ವಾಗ್ದಾಳಿ

Prathinidhi News
Last updated: March 27, 2024 1:18 pm
Prathinidhi News
Published March 27, 2024
Share
SHARE

ಧಾರವಾಡ : ಕೋಲಾರದಲ್ಲಿ  ಸಚಿವ ಮುನಿಯಪ್ಪ ಅಳಿಯಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಪಕ್ಷದ ಐವರು ಶಾಸಕರು ಎಚ್ಚರಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ , ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಶಾಸಕರು ಈ ಹೇಳಿಕೆಯಿಂದ ತಿಳಿಯುತ್ತದೆ ಎಂದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಇತರರ ನಡುವೆ ಜಗಳವಿದೆ. ಅವರಿಂದ ಸರ್ಕಾರ ಸರಿಯಾಗಿ ನಡೆಸಲು ಆಗುತ್ತಿಲ್ಲ. ಅನಗತ್ಯವಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಶೇ 75ರಷ್ಟು ಎಸ್​​ಡಿಆರ್ ಎಫ್ ಹಣವನ್ನು ಭಾರತ ಸರ್ಕಾರ ಕೊಡುತ್ತದೆ. ಆ ಹಣ ಹಂಚಿಕೆಯಾಗಿ ಬಿಡುಗಡೆ ಆಗಿಲ್ಲ. ಅದನ್ನು ಬಿಟ್ಟು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಯುಪಿಎ ಸರ್ಕಾರಕ್ಕಿಂತ ಹೆಚ್ಚು ಅನುದಾನ ನಾವು ಕೊಡುತ್ತಿದ್ದೇವೆ. ಇಷ್ಟೆಲ್ಲ ಇದ್ದರು ಸುಳ್ಳು ಸುದ್ದಿ ಹೇಳಿ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಈ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು ಎಂಬ ಭಾವನೆ ಜನರಲ್ಲಿ ಬಂದಿದೆ ಎಂದು ಜೋಶಿ ಹೇಳಿದರು.

ಜನಸಾಮಾನ್ಯರಿಗೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ಶಾಸಕರಿಗೇ ಸರ್ಕಾರದ ಬಗ್ಗೆ ರೋಸಿ ಹೋಗಿದೆ. ಸಿದ್ದರಾಮಯ್ಯ ಒಬ್ಬ ಅಶಕ್ತ ಮುಖ್ಯಮಂತ್ರಿ ಎಂದು ಅವರು ವಾಗ್ದಾಳಿ ನಡೆಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟಮೈಸೂರು ನಗರ

ಬೂತ್‌ ಓಪನ್‌ ಆಗೋದನ್ನೇ ಜನ ಕಾಯ್ತಿದ್ದಾರೆ; ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್

April 23, 2024
ಮುಖಪುಟಹಾಸನ

ಪ್ರಜ್ವಲ್ ಪೆನ್​ಡ್ರೈವ್ ಹಂಚಿಕೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

May 13, 2024
ಚುನಾವಣೆಮುಖಪುಟಮೈಸೂರು ನಗರ

ರಾಜಕೀಯದಿಂದ ನಾನೀಗ ನಿವೃತ್ತನಾಗಿರುವುದರಿಂದ ಚುನಾವಣೆಯಲ್ಲಿ ಸಹಕರಿಸುವಂತೆ ಸಿದ್ದರಾಮಯ್ಯ ಕೋರಿದರು: ವಿ ಶ್ರೀನಿವಾಸ್ ಪ್ರಸಾದ್

April 13, 2024
ಮುಖಪುಟಮೈಸೂರು ನಗರ

ಮೈಸೂರಲ್ಲಿ ಮತ್ತೆ 25 ಮರಗಳ ಹತ್ಯಾಕಾಂಡಕ್ಕೆ ಸಿದ್ಧತೆ : ಸಾರ್ವಜನಿಕ ಆಕ್ರೋಶ

April 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?