ಮೈಸೂರು, ಜನವರಿ 13,2026: ಸಂಕ್ರಾಂತಿ ಹಬ್ಬದ ಅಂಗವಾಗಿ ಪ್ರತಾಪ್ ಸಿಂಹ ಬಳಗದ ವತಿಯಿಂದ ವಾರ್ಡ್ ನಂಬರ್ 23ರ ಜಗನ್ಮೋಹನ ಅರಮನೆಯ ಮುಂಭಾಗ ಪೌರಕಾರ್ಮಿಕರಿಗೆ ಎಳ್ಳು ಬೆಲ್ಲ ಸ್ವೆಟರ್ ವಿತರಿಸಲಾಯಿತು. ಈ ವೇಳೆ ಪೌರಕಾರ್ಮಿಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ,ನಾರಾಯಣಗೌಡ, ಪೌರ ಕಾರ್ಮಿಕ ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆಯ ಜವಾಬ್ದಾರಿಯೊಂದಿಗೆ ಪಟ್ಟಣ ಜನರ ಆರೋಗ್ಯ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಸಹೋದರಿಯರಿಗೆ ಬಾಗಿನ ನೀಡಿದ್ದು, ಇದನ್ನು ಪ್ರತಿವರ್ಷ ಮುಂದುವರಿಸಲಿ , ಇಂತಹ ಮೌಲ್ಯಯುತ ಸೇವೆ ತಮ್ಮಲ್ಲಿ ಖುಷಿ ನೀಡಿದ್ದು, ನಮಗಾಗಿ ದುಡಿಯುವ ಪೌರಕಾರ್ಮಿಕ ಮಹಿಳೆಯರ ಮನ-ಮೊಗದಲ್ಲಿ ಸಂತಸ ಮೂಡಿರುವುದು ಸಾರ್ಥಕ ತರಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಸ್ ಕೆ ದಿನೇಶ್, ಮಾಜಿನಗರ ಪಾಲಿಕಾ ಸದಸ್ಯರಾದ ಉಮೇಶ್, ಕಾರ್ಯಕ್ರಮದ ಆಯೋಜಕರಾದ ಆರ್ ಪರಮೇಶ್ ಗೌಡ, ಪ್ರಮೋದ್ ಗೌಡ, ಚೇತನ್ ಗೌಡ, ಸಂದೇಶ್ ಪವಾರ್ ,ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಜಿ ನಾಗರಾಜ್, ಮಂಜುನಾಥ್, ಗಾಣಿಗ ಸಮುದಾಯದ ಮುಖಂಡರಾದ ರಾಜು, ಭಾನುಮತಿ, ಗೀತಾ, ಮಧು, ವಿ ಎಸ್ ಕಿರಣ್, ಶ್ರವಣ್ ಮಾಲಿ , ಮಡಿವಾಳ ನಾಗೇಶ್, ಸಾಗರ್, ರಾಜು, ಹಾಗೂ ಇನ್ನಿತರರು ಹಾಜರಿದ್ದರು.
