ನವದೆಹಲಿ: 1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕರಾಳ ಸ್ಮರಣೆಯ ಭಾಗವಾಗಿ ಹುತಾತ್ಮರಿಗೆ ರಾಷ್ಟ್ರಪತಿ ದೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ‘ಜಲಿಯನ್ ವಾಲಾಬಾಗ್ನಲ್ಲಿ ಮಾತೃಭೂಮಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಭಾವಪೂರ್ಣ ನಮನಗಳು! ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಎಲ್ಲ ಮಹಾನ್ ಚೇತನಗಳಿಗೆ ದೇಶವಾಸಿಗಳು ಎಂದಿಗೂ ಋಣಿಯಾಗಿರುತ್ತಾರೆ. ಹುತಾತ್ಮರ ದೇಶಪ್ರೇಮವು ಸದಾ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ’ ಎಂದು ರಾಷ್ಟ್ರಪತಿ ಬ್ರೌಪದಿ ಮುರ್ಮು ಹೇಳಿದರು. ‘ದೇಶದಾದ್ಯಂತ ನನ್ನ ಕುಟುಂಬದ ಸದಸ್ಯರ ಪರವಾಗಿ, ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಎಲ್ಲ ವೀರ ಹುತಾತ್ಮರಿಗೆ ನನ್ನ ಗೌರವ ನಮನವನ್ನು ಸಲ್ಲಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
