ಶಿವಮೊಗ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯ, ಕೇಂದ್ರ ನಾಯಕರು ಕಣಕ್ಕೆ ಇಳಿದಿದ್ದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರನ್ನು ಸೆಳೆಯಲು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಮುಂದಾಗಿದ್ದಾರೆ. ಮುಂದಿನ ಎಂಟು ದಿನಗಳಲ್ಲಿ ನಾಲ್ಕು ರ್ಯಾಲಿಗಳನ್ನು ನಡೆಸುವ ನಿರೀಕ್ಷೆಯಿದೆ. ಮಾರ್ಚ್ 15 ಮತ್ತು 19 ರ ನಡುವೆ ಕೋಲಾರ, ಶಿವಮೊಗ್ಗ, ಬೀದರ್ ಮತ್ತು ಧಾರವಾಡದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಪ್ರಧಾನಿಯವರು ಇದೇ ಅವಧಿಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಇತರ ರ್ಯಾಲಿಗಳನ್ನು ನಡೆಸಲಿದ್ದಾರೆ. ಭಾರತೀಯ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲೇ, ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅವರು ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಮಾ.17 ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರ ಮಧ್ಯಾಹ್ನ 2 ಗಂಟೆಗೆ ಕೇರಳದಿಂದ ನೇರವಾಗಿ ವಿಶೇಷ ಫ್ಲೈಟ್ನಲ್ಲಿ ಆಗಮಿಸಲಿದ್ದು ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
![](https://www.prathinidhi.net/wp-content/uploads/2024/03/1250957-whatsapp-image-2024-03-06-at-101046-pm-1.webp)