PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚುನಾವಣಾ ಉಸ್ತುವಾರಿ ವಿರುದ್ಧ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಚುನಾವಣಾ ಉಸ್ತುವಾರಿ ವಿರುದ್ಧ ಪ್ರತಿಭಟನೆ
ಮೈಸೂರು ಗ್ರಾಮಾಂತರ

ಚುನಾವಣಾ ಉಸ್ತುವಾರಿ ವಿರುದ್ಧ ಪ್ರತಿಭಟನೆ

ಪ್ರತಿನಿಧಿ
Last updated: April 22, 2024 5:41 pm
ಪ್ರತಿನಿಧಿ
Published April 22, 2024
Share
SHARE

ಪ್ರತಿನಿಧಿ ವರದಿ ಪಿರಿಯಾಪಟ್ಟಣ

ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಅಂಚೆ ಮತ ಪತ್ರಗಳನ್ನು ಸಕಾಲದಲ್ಲಿ ಒದಗಿಸದ ಚುನಾವಣಾ ಅಧಿಕಾರಿಗಳ ನಡೆಯನ್ನು ಖಂಡಿಸಿ ಚುನಾವಣಾ ತರಬೇತಿಗೆಂದು ಹಾಜರಾಗಿದ್ದ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪುಷ್ಪ ವಿದ್ಯಾಸಂಸ್ಥೆಯಲ್ಲಿ ಶನಿವಾರ ಪಿರಿಯಾಪಟ್ಟಣ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಸಿಬ್ಬಂದಿಗೆ ತರಬೇತಿ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತರಬೇತಿ ಮುಗಿದ ನಂತರ ಅಂಚೆ ಮತ ಪತ್ರಗಳನ್ನು ಒದಗಿಸಬೇಕಿದ್ದ ತಾಲೂಕು ಆಡಳಿತದ ಚುನಾವಣಾ ಉಸ್ತುವಾರಿ ಅಧಿಕಾರಿಗಳು ಅಂಚೆ ಮತ ಪತ್ರಗಳನ್ನು ತಲುಪಿಸದ ಕಾರಣ ಆಕ್ರೋಶಗೊಂಡ ಚುನಾವಣಾ ಕರ್ತವ್ಯದ ಸಿಬ್ಬಂದಿ, ನಾವು ಕೊಳ್ಳೇಗಾಲ ಸೇರಿದಂತೆ ದೂರದ ಊರುಗಳಿಂದ ಬಂದಿದ್ದೇವೆ. ನಮಗೆ ಅಂಚೆ ಮತಪತ್ರಗಳನ್ನು ನೀಡದೆ ಸತಾಯಿಸುತ್ತಿದ್ದೀರಿ. ನಾಳೆ, ನಾಡಿದ್ದು ಬನ್ನಿ ಎಂದು ಹೇಳುತ್ತಿದ್ದೀರಿ. ಮತ್ತೊಮ್ಮೆ ಅದಕ್ಕಾಗಿ ಇಲ್ಲಿಗೆ ಬರಲು ಸಾಧ್ಯವಿಲ್ಲ. ನಮ್ಮ ಮತಗಳನ್ನು ಬೇರೆಯವರು ಚಲಾಯಿಸುವುದಿಲ್ಲ ಎಂಬ ಗ್ಯಾರಂಟಿ  ಏನು ಎಂದು ಪ್ರಶ್ನಿಸಿದರು.

ಇದಕ್ಕೆ ಸಮಜಾಯಿಷಿ ನೀಡಿದ ಸಹಾಯಕ ಚುನಾವಣಾ ಅಧಿಕಾರಿ ಜಿ.ಡಿ.ಶೇಖರ್, ಮತಪತ್ರಗಳನ್ನು ಕ್ರಮಬದ್ಧವಾಗಿ ನಮಗೆ ತಲುಪಿಸಬೇಕಿತ್ತು. ಅವುಗಳು ಸಕಾಲದಲ್ಲಿ ಇಲ್ಲಿಗೆ ತಲುಪಿಲ್ಲ. ಆದ್ದರಿಂದ ನೀವು ಯಾವ ತಾಲೂಕು ಕೇಂದ್ರದಲ್ಲಿ ಮತ ಚಲಾಯಿಸುತ್ತೇನೆಂದು ಲಿಖಿತ ರೂಪದಲ್ಲಿ ನಮಗೆ ಬರೆದುಕೊಟ್ಟರೆ, ಅಲ್ಲಿಗೆ ನಿಮ್ಮ ಅಂಚೆ ಮತಪತ್ರಗಳನ್ನೂ ತಲುಪಿಸಲಾಗುವುದು ಎಂದು ಸಿಬ್ಬಂದಿಯನ್ನು ಸಮಾಧಾನಪಡಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು ..!

May 28, 2025
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರರಾಜಕೀಯ

ಬೇಸಿಗೆ ಆರಂಭದಲ್ಲೇ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ನೀರಿಗಾಗಿ ಹಾಹಾಕಾರ..! ಕ್ಯಾರೆ ಎನ್ನದ ಅಧಿಕಾರಿಗಳು..!

March 17, 2025
ಮೈಸೂರು ಗ್ರಾಮಾಂತರ

ಕಪ್ಪು ಚುಕ್ಕೆ ಇಲ್ಲದ ಆಡಳಿತ ಮೋದಿ ಅವರದ್ದು

April 19, 2024
ಮುಖಪುಟಮೈಸೂರು ಗ್ರಾಮಾಂತರ

ಹಾಡಿಗಳ ಜನರು ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ

May 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?