PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೊರಗುತ್ತಿಗೆ ನೌಕರರಿಗೆ ವಂಚನೆ ಖಂಡಿಸಿ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಹೊರಗುತ್ತಿಗೆ ನೌಕರರಿಗೆ ವಂಚನೆ ಖಂಡಿಸಿ ಪ್ರತಿಭಟನೆ
ಚಾಮರಾಜನಗರ

ಹೊರಗುತ್ತಿಗೆ ನೌಕರರಿಗೆ ವಂಚನೆ ಖಂಡಿಸಿ ಪ್ರತಿಭಟನೆ

ಪ್ರತಿನಿಧಿ
Last updated: May 29, 2024 6:24 pm
ಪ್ರತಿನಿಧಿ
Published May 29, 2024
Share
SHARE

ಹೊರಗುತ್ತಿಗೆ ನೌಕರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Oplus_0

ಪ್ರತಿನಿಧಿ ವರದಿ ಯಳಂದೂರು

ಹೊರ ಗುತ್ತಿಗೆ ನೌಕರರ ಮೇಲೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರಿನ ಕಾಂತಿ ಏಜೆನ್ಸಿಯಿಂದ  ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆಯ ಸದಸ್ಯರು ಪಟ್ಟಣದ ಸಮಾಜ ಕಲ್ಯಾಣ ಕಚೇರಿ ಎದುರು ಪ್ರತಿಭಟಿಸಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಪರಶಿವಮೂರ್ತಿ ಮಾತನಾಡಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಗುರುಸ್ವಾಮಿ ಎಂಬುವರು ಹೊರಗುತ್ತಿಗೆಎಂಬುವರು ನೌಕರ ಡಾಟಾ ಎಂಟ್ರಿ ಆಪರೇಟರಾಗಿ ಕೆಲಸ ನಿರ್ವಹಿಸಿದ್ದು ಇವರಿಗೆ ಸರಿಯಾಗಿ ವೇತನ, ಇಎಸ್‍ಐ ಹಾಗೂ ಪಿಎಫ್ ನೀಡುತ್ತಿಲ್ಲ. ಈ ಬಗ್ಗೆ ಉಪ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರಿಗೆ ಸಾಕಷ್ಟು ಬಾರಿ ತಿಳಿಸಿದ್ದರೂ ಕ್ರಮ ವಹಿಸಿಲ್ಲ. ಇದರೊಂದಿಗೆ ಅನೇಕ ಹೊರಗುತ್ತಿಗೆ ನೌಕರರಿಗೆ ವಿನಾಕಾರಣ ಕೆಲಸದಿಂದ ಹೊರ ಹಾಕಲಾಗಿದೆ. ಅಡುಗೆ ಸಹಾಯಕರೂ ಇದರಲ್ಲಿ ಸೇರಿದ್ದಾರೆ. ಈ ಬಗ್ಗೆ ಸಂಘಸಂಸ್ಥೆಗಳ ಪ್ರತಿನಿಧಿಗಳೂ ಕೂಡ ಈ ಹಿಂದೆ ಪ್ರತಿಭಟನೆ ನಡೆಸಿದ್ದರೂ ಕ್ರಮ ವಹಿಸುತ್ತಿಲ್ಲ. ಕವಿತ ಹಾಗೂ ರೇಣುಕಾ ಎಂಬವರಿಗೆ 5 ತಿಂಗಳಿಂದ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಮಕ್ಕಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟವೂ ಕಡಿಮೆ ಇದೆ. ಬಯೋಮೆಟ್ರಿಕ್ ಸರಿಯಾಗಿ ಬಳಕೆಯಾಗುತ್ತಿಲ್ಲ. ಕಾಂತಿ ಏಜೇನ್ಸಿಸ್‍ನಿಂದ ವೇತನ ಪಾವತಿ, ಇಎಸ್‍ಐ, ಪಿಎಫ್‍ನಲ್ಲಿ ವಂಚನೆ ಮಾಡಲಾಗುತ್ತಿದೆ ಎಂದು ಈ ಹಿಂದೆ ಉಪನಿರ್ದೇಶಕರಿಗೂ ಮನವಿ ಮಾಡಿದ್ದರೂ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಪ್ರತಿಭಟಿಸಿದರು.

- ಜಾಹೀರಾತು -

ಸ್ಥಳಕ್ಕೆ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭೇಟಿ ನೀಡಿ, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ಇಲ್ಲಿನ ಕಚೇರಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಗುರುಸ್ವಾಮಿ ಎಂಬವರು ಕಚೇರಿಯ ಗೌಪ್ಯ ಮಾಹಿತಿಯನ್ನು ಹೊರಗಿನ ವ್ಯಕ್ತಿಗಳಿಗೆ ಸೋರಿಕೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೂ ಕೂಡ ಧಮ್ಕಿ ಹಾಕುತ್ತಿದ್ದರು. ಈ ಬಗ್ಗೆ ಕೆಲ ಸಾರ್ವಜನಿಕರು ನಮ್ಮ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ನಮ್ಮ ಕಚೇರಿಯಲ್ಲಿ ದಾಖಲೆಗಳು ಇವೆ. ಹಾಗಾಗಿ ಇವರನ್ನು ಹಿರಿಯ ಅಧಿಕಾರಿಗಳು ಇವರನ್ನು ಕೆಲಸದಿಂದ ವಜಾ ಮಾಡಿ ಎಂದು ಆದೇಶ ಮಾಡಿರುವುದರಿಂದ ಇವರನ್ನು ತೆಗೆದು ಹಾಕಲಾಗಿದೆ. ಮುಂದೆ ಇಂತಹ ಕೆಲಸಗಳನ್ನು ಮಾಡುವುದಿಲ್ಲ ಎಂದು ಗುರುಸ್ವಾಮಿಯಿಂದ ಕ್ಷಮಾಪಣೆ ಪತ್ರವನ್ನು ಬರೆಯಿಸಿಕೊಂಡು, ಮತ್ತೆ ಹೊರ ಗುತ್ತಿಗೆ ಆದಾರದ ಮೇಲೆ ಕೆಲಸಕ್ಕೆ ನೇಮಿಸಿಕೊಳ್ಳಲು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದುಕೊಂಡರು.

ಜಿಲ್ಲಾ ಕಾರ್ಯದರ್ಶಿ ಬದನಗುಪ್ಪೆ ಮಹೇಶ್, ಎಂ. ರಾಜಣ್ಣ, ಸಿದ್ದರಾಜು, ಮದ್ದೂರು ಪ್ರಸಾದ್, ಮರಪ್ಪ, ರಾಜು, ಬಸವಾಪುರ ರಾಜಶೇಖರ್, ಚಂಗಚಹಳ್ಳಿ ನಾಗೇಂದ್ರ, ಕೊಮಾರನಪುರ, ಮರಯ್ಯ ಕೆಸ್ತೂರು, ರಾಜಣ್ಣ, ಜೋಗಿ ಸಿದ್ಧಯ್ಯ, ಶಿವಣ್ಣ ಸೇರಿದಂತೆ ಇತರರು ಇದ್ದರು.

28ವೈಎಲ್ಡಿ.1:
ಚಿತ್ರವಿದೆ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ದುರಸ್ತಿಯಾಗದ ಆರ್‌ಒ ಪ್ಲಾಂಟ್

July 2, 2024
ಚಾಮರಾಜನಗರ

ಮೈತ್ರಿಕೂಟದ ಅಭ್ಯರ್ಥಿ ಪರ ಮತಯಾಚನೆ

May 29, 2024
ಚಾಮರಾಜನಗರಜಿಲ್ಲೆಮುಖಪುಟ

ಮಲೆ ಮಹದೇಶ್ವರ ಬೆಟ್ಟ ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಹುಲಿ ಕಳೇಬರ ಪತ್ತೆ..! 4 ತಿಂಗಳಲ್ಲಿ ಎಂಟು ಹುಲಿಗಳ ಮಾರಣಹೋಮ !

October 3, 2025
ಚಾಮರಾಜನಗರ

ನೆಟ್ ಬಾಲ್ ಕ್ರೀಡಾಪಟುಗಳಿಗೆ ಅಭಿನಂದನೆ

May 23, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?