PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರೈತರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ರೈತರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ಸಮಗ್ರ

ರೈತರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಪ್ರತಿನಿಧಿ
Last updated: May 15, 2024 8:20 pm
ಪ್ರತಿನಿಧಿ
Published May 15, 2024
Share
SHARE

ಚೆನ್ನೈ ಕಾರಿಡಾರ್ ನಲ್ಲಿ ರೈತ ಸಂಘದಿಂದ ಪ್ರತಿಭಟನೆ

ಕೋಲಾರ:  ಚೆನ್ನೈ ಕಾರಿಡಾರ್ ರಸ್ತೆ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಟಿಪ್ಪರ್ ಲಾರಿಗಳ ಹಾವಳಿಯ ಧೂಳಿನಿಂದ ನಷ್ಟವಾಗಿರುವ ರೈತರಿಗೆ ಪರಿಹಾರ ನೀಡುವಂತೆ ರೈತಸಂಘದಿಂದ ಕಾಮಗಾರಿ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಸಮೇತ ಪ್ರತಿಭಟನೆ ನಡೆಸಿ ಗುತ್ತಿಗೆದಾರ ನಾಯ್ಡುಅವರಿಗೆ  ೪೮ ಗಂಟೆ ಗಡುವಿನೊಂದಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟ್ಯಾಂತರ ರೂಪಾಯಿ ಬೆಳೆ ಪರಿಹಾರವನ್ನು ಲೂಟಿ ಮಾಡಿ ಚೆನ್ನೈ ಕಾರಿಡಾರ್ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಧೂಳಿನಿಂದ ನಷ್ಟವಾಗಿರುವ ರೈತರ ವಾಣಿಜ್ಯ ಬೆಳೆಗಳಿಗೆ ಪ್ರತಿ ಎಕರೆಗೆ ೫ ಲಕ್ಷ ಪರಿಹಾರ ವಿತರಣೆ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಮನವಿ ಮೂಲಕ ಒತ್ತಾಯಿಸಿದರು.

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂ ಸ್ವಾಧೀನ ಮಾಡಿಕೊಂಡ ಸಮಯದಲ್ಲಿ ರೈತರಿಗೆ ಪರಿಹಾರ ನೀಡಲು ವಿಶೇಷ ಭೂಸ್ವಾಧೀನಾಧಿಕಾರಿಗಳು ಪಡೆದಿರುವ ದಾಖಲೆಗಳನ್ನೇ ದುರುಪಯೋಗ ಪಡಿಸಿಕೊಂಡು ಮಾಲೂರಿನಿಂದ ಮುಳಬಾಗಲು ಗಡಿಭಾಗದವರೆಗೆ ನೂರು ಕೋಟಿ ರೈತರ ಬೆಳೆ ಪರಿಹಾರದ ಹಣವನ್ನು ಲೂಟಿ ಮಾಡಿ ರೈತರಿಗೆ ಮೂರು ನಾಮ ಹಾಕುತ್ತಿದ್ದಾರೆಂದು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- ಜಾಹೀರಾತು -

ಪರಿಹಾರಕ್ಕಾಗಿ ನೊಂದ ರೈತರು ಅಂಗಲಾಚಿ ಬೇಡಿದರೂ ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ರೈತರ ಅರ್ಜಿಯನ್ನು ಸ್ವೀಕರಿಸಲು ಪುರಸೊತ್ತಿಲ್ಲದ ವಿಶೇಷ ಭೂಸ್ವಾಧೀನಾಧಿಕಾರಿಗಳು ಅವರ ಗುಲಾಮರಂತೆ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ರೈತರ ಹೆಸರಿನಲ್ಲಿ ಲೂಟಿ ಮಾಡುತ್ತಿರುವ ಗುತ್ತಿಗೆದಾರರು ಈ ಮೂವರ ಮಧ್ಯೆ ಸಿಲುಕಿ ಬದುಕಲಾರದೆ, ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟದಲ್ಲಿರುವ ರೈತರಿಗೆ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು.

ಬರಗಾಲದಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಕ್ಯಾಪ್ಸಿಕಂ, ಹೂ, ರೇಷ್ಮೆ, ಟೊಮೇಟೊ, ಬೆಳೆಗಳನ್ನು ಬರಗಾಲದಲ್ಲೂ ನೀರಿನ ಅಭಾವ, ವಿದ್ಯುತ್ ಅವ್ಯವಸ್ಥೆ, ರೋಗಗಳಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುತ್ತಾ ಬಂದರೆ ಮತ್ತೊಂದು ತಲೆನೋವು ರೈತರಿಗೆ ನಿದ್ದೆ ಗೆಡಿಸಿದೆ. ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಜಮೀನನ್ನು ಭೂಸ್ವಾಧೀನಾ ಮಾಡಿಕೊಂಡು ಉಳಿಕೆ ಇರುವ ಜಮೀನಿನಲ್ಲಿ ಕಷ್ಟಪಟ್ಟು ಬೆಳೆದಿರುವ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ರೈತರಿಗೆ ಹರಸಾಹಸವಾಗಿದೆ ಎಂದು ಅವ್ಯವಸ್ಥೆ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಸಮಸ್ಯೆ ಎಂದರೆ ಧೂಳು ಎಷ್ಟರ ಮಟ್ಟಿಗೆ ಇದೆ ಎಂದರೆ ನೀರಿನಲ್ಲಿ ತೊಳೆದರೂ ಧೂಳು ಮಾತ್ರ ಹೋಗುತ್ತಿಲ್ಲ. ಜೊತೆಗೆ ಸಂಬಂಧಪಟ್ಟ ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆ ಅಧಿಕಾರಿಗಳು ನಷ್ಟದ ಬಗ್ಗೆ ವರದಿ ನೀಡಿ ನಷ್ಟ ಪರಿಹಾರ ನೀಡುವಂತೆ ಗುತ್ತಿಗೆದಾರರಿಗೆ ನೀಡಿದರೆ ಗುತ್ತಿಗೆದಾರರು ವರದಿಯನ್ನು ಕಾಲು ಕಸದಂತೆ ಕಸದ ಬುಟ್ಟಿಗೆ ಹಾಕಿ ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿ ಮಾಡಿ ಮಾಲೂರಿನಿಂದ ಮುಳಬಾಗಲು ಗಡಿಭಾಗದವರೆಗೆ ೧೦೦ ಕೋಟಿಗೂ ಹೆಚ್ಚು ಬೆಳೆ ಪರಿಹಾರವನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಆರೋಪಿಸಿದರು.

ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದ ಗುತ್ತಿಗೆದಾರ ನಾಯ್ಡು ಸಂಬಂಧಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ತಂದು ನೊಂದ ರೈತರಿಗೆ ಪರಿಹಾರ ವಿತರಣೆ ಮಾಡುವ ಭರವಸೆಯನ್ನು ನೀಡಿದರು ಪ್ರತಿಭಟನೆಯಲ್ಲಿ ಮಂಗಸಂದ್ರ ತಿಮ್ಮಣ್ಣ, ಗಿರೀಶ್,  ಶಿವಾರೆಡ್ಡಿ, ಪುತ್ತೇರಿ ರಾಜು, ಮರಗಲ್ ಮುನಿಯಪ್ಪ, ಶೈಲಜ, ರತ್ನಮ್ಮ, ವೆಂಕಟಮ್ಮ, ಗೌರಮ್ಮ, ಸುಪ್ರೀಂ ಚಲ, ವಿನು ಮುಂತಾದವರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಸಂಪಾದಕೀಯಸಮಗ್ರ

ಎನ್‌ಇಪಿ ರದ್ದು ನಿರ್ಧಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

December 12, 2023
ಸಮಗ್ರ

ಜೂ.21ರಂದು ಸರ್ಕಾರಿ ನೌಕರರ ಕ್ರೀಡಾಕೂಟ

May 17, 2024
ಸಮಗ್ರ

ಗಿಡ ನೆಟ್ಟು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ

May 2, 2024
ಸಮಗ್ರ

ದತ್ತಿನಿಧಿ ಪ್ರಶಸ್ತಿ ಪುರಸ್ಕೃರಿಗೆ ಅಭಿನಂದನೆ

March 29, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?