PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಇಂದು ಇಂಡಿಗನತ್ತದಲ್ಲಿ ಮರು ಮತದಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಇಂದು ಇಂಡಿಗನತ್ತದಲ್ಲಿ ಮರು ಮತದಾನ
ಚಾಮರಾಜನಗರ

ಇಂದು ಇಂಡಿಗನತ್ತದಲ್ಲಿ ಮರು ಮತದಾನ

ಪ್ರತಿನಿಧಿ
Last updated: April 28, 2024 8:52 pm
ಪ್ರತಿನಿಧಿ
Published April 28, 2024
Share
SHARE

ಪ್ರತಿನಿಧಿ ವರದಿ ಚಾಮರಾಜನಗರ

ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರವ್ಯಾಪ್ತಿಯ 221-ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 146ರಲ್ಲಿ ಏಪ್ರಿಲ್ 29ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದ್ದು, ಮತದಾನ ಕೇಂದ್ರದಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಏ28ರ ಮಧ್ಯರಾತ್ರಿ 12 ಗಂಟೆಯಿಂದ ಏ.29ರ ಮಧ್ಯರಾತ್ರಿ 12 ಗಂಟೆಯವರೆಗೆ ಭಾರತ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144 ರನ್ವಯ ಮತಗಟ್ಟೆಯ ಸುತ್ತಲು 100 ಮೀ. ಅಂತರದೊಳಗೆ ಕೆಲ ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

ಮೆರವಣಿಗೆ ಅಥವಾ 5 ಜನರಿಗಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಪೋಟಕ ವಸ್ತುಗಳನ್ನು ಒಯ್ಯವಂತಿಲ್ಲ. ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿರ್ಬಂಧಿಸಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಡುವುದು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿ ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ, ಸಾರ್ವಜನಿಕರ ಗಾಂಭೀರ್ಯ, ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ಚುನಾವಣಾ ಕರ್ತವ್ಯ ನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿ, ಪೊಲೀಸ್ ಅಧಿಕಾರಿ, ನೇಮಕಗೊಂಡಿರುವ ಚುನಾವಣಾ ಏಜೆಂಟರು ಮತ್ತು ಒಬ್ಬೊಬ್ಬರಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಅಂತ್ಯಕ್ರಿಯೆ ಮೆರವಣಿಗೆ ಹಾಗೂ ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಆದೇಶವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಜಿಲ್ಲೆಮುಖಪುಟ

ನಾಟಿ ಕೋಳಿ ಸಾರು, ಮುದ್ದೆ ತಿನ್ನುವ ಸ್ಪರ್ಧೆ – 11 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದ ವ್ಯಕ್ತಿ

June 10, 2025
ಚಾಮರಾಜನಗರ

ಹಾಡು ಹಗಲೇ ಸರ್ಕಾರಿ ರಸ್ತೆ ಜಾಗ ಅತಿಕ್ರಮಣ

July 4, 2024
ಚಾಮರಾಜನಗರಮುಖಪುಟ

ಮಲೆ ಮಹದೇಶ್ವರನಿಗೆ ಬರೋಬ್ಬರಿ 85 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ಧಾರಣೆ

March 10, 2024
ಚಾಮರಾಜನಗರ

ಗ್ರಾಮೀಣ ಮಕ್ಕಳಿಗೂ ಡಿಜಿಟಲ್ ಶಿಕ್ಷಣ [ಲೀಡ್]

March 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?