PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಿವೃತ್ತ ಅಧಿಕಾರಿಗೆ ಸಿಬಿಐ ಹೆಸರಲ್ಲಿ ಬೆದರಿಸಿ ₹42 ಲಕ್ಷ ವಂಚನೆ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ನಿವೃತ್ತ ಅಧಿಕಾರಿಗೆ ಸಿಬಿಐ ಹೆಸರಲ್ಲಿ ಬೆದರಿಸಿ ₹42 ಲಕ್ಷ ವಂಚನೆ!
ಜಿಲ್ಲೆ

ನಿವೃತ್ತ ಅಧಿಕಾರಿಗೆ ಸಿಬಿಐ ಹೆಸರಲ್ಲಿ ಬೆದರಿಸಿ ₹42 ಲಕ್ಷ ವಂಚನೆ!

Prathinidhi News
Last updated: December 1, 2023 9:41 am
Prathinidhi News
Published December 1, 2023
Share
SHARE

ಬೆಂಗಳೂರು (ನ.1): ಹಣಕಾಸು ಅವ್ಯವಹಾರ ಪ್ರಕರಣ ಸಂಬಂಧ ಜೈಲು ಸೇರಿರುವ ಖ್ಯಾತ ಉದ್ಯಮಿ ನರೇಜ್‌ ಗೋಯೆಲ್‌ ಜತೆ ಅಕ್ರಮ ಹಣಕಾಸು ವ್ಯವಹಾರ ನಡೆಸಿರುವುದಾಗಿ ಸಿಐಬಿ ಅಧಿಕಾರಿ ಹೆಸರಿನಲ್ಲಿ ಬೆದರಿಸಿ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರಿಂದ ₹42 ಲಕ್ಷವನ್ನು ಸೈಬರ್‌ ವಂಚಕರು ದೋಚಿದ್ದಾರೆ.

ಎಂಆರ್‌ವಿ ಬಡಾವಣೆಯ ಎಂಎಲ್‌ಎ ಲೇಔಟ್ ನಿವಾಸಿ ಎ.ಮಹೇಂದ್ರ ಹಣ ಕಳೆದುಕೊಂಡಿದ್ದು, ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಅಕಾಶ್‌ ಕುಲಹರಿ ಸೇರಿದಂತೆ ಇತರರ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಣಕಾಸು ಅಕ್ರಮ ಪ್ರಕರಣ ಸಂಬಂಧ ಜೆಟ್‌ ಏರ್‌ವೇಸ್ ಸಂಸ್ಥೆಯ ಸಂಸ್ಥಾಪಕ ನರೇಶ್ ಗೋಯೆಲ್ ಅವರನ್ನು ಸಿಬಿಐ ಬಂಧಿಸಿದೆ.

ಹೇಗೆ ವಂಚನೆ?

ನ.17ರಂದು ನಿವೃತ್ತ ಪಿಎಫ್‌ ಆಯುಕ್ತ ಮಹೇಂದ್ರ ಅವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ತನ್ನನ್ನು ಸಿಬಿಐ ಅಧಿಕಾರಿ ಆಕಾಶ್ ಕುಲಹರಿ ಎಂದು ಪರಿಚಯಿಸಿ ಕೊಂಡಿದ್ದಾನೆ. ನೀವು ಉದ್ಯಮಿ ನರೇಶ್ ಗೋಯೆಲ್‌ ಜತೆ ಅಕ್ರಮವಾಗಿ ಹಣಕಾಸು ವ್ಯವಹಾರ ನಡೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ನೀವು ರಾಷ್ಟ್ರೀಯ ಬ್ಯಾಂಕ್‌ವೊಂದರ ಮೂಲಕ ನರೇಶ್ ಜತೆ ಅಕ್ರಮ ಹಣ ವರ್ಗಾವಣೆ ನಡೆಸಿರುವುದು ಪುರಾವೆ ಸಹ ಲಭಿಸಿದೆ ಎಂದಿದ್ದಾನೆ. ಇದಕ್ಕೆ ಪೂರಕವಾಗಿ ಸರ್ವೋಚ್ಛ ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಲಭಿಸಿದ ದಾಖಲೆಗಳು ಎಂದು ಹೇಳಿ ಮಹೇಂದ್ರ ಅವರಿಗೆ ದಾಖಲೆಗಳನ್ನು ತೋರಿಸಿದ್ದಾನೆ. ನಿಮ್ಮ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದ್ದು, ಬಂಧನದಿಂದ ತಪ್ಪಿಸಲು ಹಣ ನೀಡಬೇಕಾಗುತ್ತದೆ ಎಂದಿದ್ದಾನೆ.

- ಜಾಹೀರಾತು -

ಕೊನೆಗೆ ಆರೋಪಿ ಸೂಚಿಸಿದಂತೆ ಆತನ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ₹42 ಲಕ್ಷಗಳನ್ನು ಅವರು ವರ್ಗಾಯಿಸಿದ್ದಾರೆ. ಬಳಿಕ ಈ ವಿಚಾರಿಸಿದಾಗ ತಾವು ವಂಚನೆಗೆ ಒಳಗಾಗಿರುವ ಸಂಗತಿ ಮಹೇಂದ್ರ ಅವರಿಗೆ ಗೊತ್ತಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಜಿಲ್ಲೆಮುಖಪುಟಮೈಸೂರು ನಗರರಾಜಕೀಯ

“ಜಿಟಿಡಿ ಮೌನ”…, “ಕೈ” ಗೆ ವರದಾನ?

October 25, 2024
ಜಿಲ್ಲೆ

ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯನ್ನು ಸಂಪಾಜೆಯಲ್ಲಿ ಭೂಮಿ ಪೂಜೆ ನೆರವೇರಿಸಿದ ಸಂಸದ ಪ್ರತಾಪ್ ಸಿಂಹ

January 2, 2024
ಜಿಲ್ಲೆ

ಜಾತಿ ಜನಗಣತಿ ದೊಡ್ಡ ಹಗರಣ ಎಂದ ಮಾಜಿ ಸಚಿವ ಸುನೀಲ್ ಕುಮಾರ್

November 23, 2023
ಜಿಲ್ಲೆ

ಮೈಸೂರು: ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

January 8, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?