PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ
ಬೆಂಗಳೂರುಮುಖಪುಟ

ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ

Prathinidhi News
Last updated: May 6, 2024 4:10 pm
Prathinidhi News
Published May 6, 2024
Share
SHARE

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್​ನಲ್ಲಿ  ಎಸ್​ಐಟಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ವಿಚಾರಣೆ ತೀವ್ರಗೊಂಡಿದೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನೆಯಿಂದ ರೇವಣ್ಣರನ್ನು ಬಂಧಿಸಿದ್ದ ಎಸ್​ಐಟಿ (SIT) ನಿನ್ನೆ ಸಂಜೆ ಜಡ್ಜ್ ಎದುರು ಹಾಜರುಪಡಿಸಿತ್ತು. ಈ ವೇಳೆ ರಾಜಕೀಯ ಭವಿಷ್ಯವನ್ನು ನೆನಪಿಸಿಕೊಂಡು ರೇವಣ್ಣ ಕೈ ಮುಗಿದು ಕಣ್ಣೀರು ಹಾಕಿದ್ದರು. ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಅಂತ ಅಳಲು ತೋಡಿಕೊಂಡಿದ್ದರು. ಸದ್ಯ 4 ದಿನಗಳ ಕಾಲ ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣಗೆ ಎಸ್​​ಐಟಿ ಅಧಿಕಾರಿಗಳು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ

ಮಹಿಳೆಯನ್ನು ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದರು ಎಂದು ಎಸ್​ಐಟಿ ಹೇಳಿಕೆ ದಾಖಲಿಸಿಕೊಂಡಿದೆ. ಆದ್ರೆ, ಎಸ್​​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್​​ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಅಂತಾ ಒಂದೇ ಉತ್ತರ ನೀಡಿದ್ದಾರೆ.

ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ರೇವಣ್ಣ ಹಿಂದೇಟು

ಇಷ್ಟೇ ಅಲ್ಲ ನನಗೂ ಕಿಡ್ನ್ಯಾಪ್​ಗೂ ಸಂಬಂಧವಿಲ್ಲ ಎಂದಿರುವ ರೇವಣ್ಣ, ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ. ಮಹಿಳೆ ಕಿಡ್ನ್ಯಾಪ್ ಕೇಸ್​​ನಲ್ಲಿ ಬಂಧನವಾಗಿರುವ ರೇವಣ್ಣ ಕಸ್ಟಡಿ ವೇಳೆಯಲ್ಲಿ ರೇವಣ್ಣ ಬೇಲ್ ಅರ್ಜಿ ಸಲ್ಲಿಸಬಹುದು. ಕಸ್ಟಡಿ ಅವಧಿ ಮುಗಿದ ಬಳಿಕವೇ ಬೇಲ್ ಬಗ್ಗೆ ತೀರ್ಮಾನವಾಗಲಿದೆ. ಕಸ್ಟಡಿ ಅವಧಿ ನಂತರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​ಐಟಿ ಸಿದ್ಧತೆ ಮಾಡಿಕೊಂಡಿದೆ. ಬೇಲ್ ಅರ್ಜಿಗೆ ಎಸ್​ಐಟಿ ಆಕ್ಷೇಪಣೆಯನ್ನು ಕೋರ್ಟ್ ಪರಿಗಣಿಸಲಿದೆ. ಎರಡೂ ಕಡೆ ವಾದಮಂಡನೆ ನಂತರವೇ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

- ಜಾಹೀರಾತು -

ಈ ಎಲ್ಲ ಪ್ರಕ್ರಿಯೆಯು ಕನಿಷ್ಠ ಒಂದು ವಾರ ನಡೆಯಬಹುದು. ಬೇಲ್ ಸಿಕ್ಕರೆ ಸೆರೆವಾಸದಿಂದ ರೇವಣ್ಣ ರಿಲೀಸ್ ಆಗ್ತಾರೆ. ಅಕಸ್ಮಾತ್ ಜನಪ್ರತಿನಿಧಿಗಳ ಕೋರ್ಟ್​ನಲ್ಲಿ ಬೇಲ್ ಸಿಗದಿದ್ದರೆ ರೇವಣ್ಣ ಹೈಕೋರ್ಟ್ ಮೊರೆ ಹೋಗಬಹುದು. ಹೈಕೋರ್ಟ್ ನಲ್ಲೂ ಬೇಲ್ ಸಿಗದಿದ್ದರೆ ಸುಪ್ರೀಂಗೆ ಮೊರೆ ಹೋಗಬಹುದು. ಆದ್ರೆ ಜಾಮೀನು ಸಿಗುವವರೆಗೆ ರೇವಣ್ಣ ಬಂಧನದಲ್ಲಿರಬೇಕಾಗಿದೆ.

ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿರುವ ರೇವಣ್ಣ

ಎಸ್​ಐಟಿ ಬಂಧನದ ಬಳಿಕ ರೇವಣ್ಣ ಮಾನಸಿಕವಾಗಿ ಕುಗ್ಗಿದ್ದಾರೆ. ಪ್ರತಿದಿನ 9.30ರಿಂದ 10.30ರ ಸಮಯದಲ್ಲಿ ಒಂದು ಗಂಟೆ ವಕೀಲರ ಭೇಟಿಗೆ ಅವಕಾಶ ಇದೆ. ವಕೀಲರ ಭೇಟಿಗೆ ಅವಕಾಶ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಇಂದು ಸಿಐಡಿ ಎಸ್​ಐಟಿ ಕಚೇರಿಯಲ್ಲಿ ಭೇಟಿಗೆ ಅನುವು ಮಾಡಿಕೊಡಲಾಗಿದೆ.

ಇನ್ನು ಹೊಳೆನರಸೀಪುರದಲ್ಲಿ ದೂರು ನೀಡಿದ್ದ ಸಂತ್ರಸ್ತ ಮಹಿಳೆಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಲಾಯ್ತು. ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯಿಂದ ಎಸ್​ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿದ್ರು. ಸಂತ್ರಸ್ತೆ ಹೇಳಿಕೆ ಆಧರಿಸಿ ಮನೆಯಲ್ಲಿ ಸಂಪೂರ್ಣ ಮಹಜರು ಮಾಡಲಾಯ್ತು. ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ 6 ಅಧಿಕಾರಿಗಳ ತಂಡ ಮಹಜರು ನಡೆಸಿದರು.

ರೇವಣ್ಣರನ್ನ ಇಂದು ಹಾಸನ ಅಥವಾ ಕೆ.ಆರ್. ನಗರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ. ಮಹಿಳೆಯನ್ನು ಕರೆದುಕೊಂಡು ಹೋಗಿದ್ದ ಸ್ಥಳ, ಕೂಡಿಟ್ಟ ಸ್ಥಳ, ಮಹಿಳೆಯ ಕರೆತಂದ ಸತೀಶ್ ಬಾಬು-ರೇವಣ್ಣ ಭೇಟಿಯಾದ ಗೌಪ್ಯ ಸ್ಥಳದ ಬಗ್ಗೆಯೂ ತನಿಖೆ ನಡೆಯಲಿದೆ.

ರೇವಣ್ಣ, ಪ್ರಜ್ವಲ್ ವಿರುದ್ಧ ದಾಖಲಾಗಿರುವ ಕೇಸ್​ಗಳಿಂದ ರೇವಣ್ಣ ಪತ್ನಿ ಭವಾನಿಗೂ ಸಂಕಷ್ಟ ಎದುರಾಗಿದೆ. ಲೈಂಗಿಕ ಕಿರುಕುಳ, ಕಿಡ್ನ್ಯಾಪ್ ಎರಡೂ ಕೇಸ್​ನಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿದೆ. ಭವಾನಿ ಕರೆದರು ಎಂದು ಹೇಳಿಯೇ ಕಿಡ್ನ್ಯಾಪ್ ಮಾಡಿರುವ ಆರೋಪವಿದೆ. ಭವಾನಿಗೆ ನೋಟಿಸ್ ನೀಡಿ ಎಸ್​ಐಟಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಭವಾನಿ ವಿರುದ್ಧ ಸಾಕ್ಷಿ ಸಿಕ್ಕರೆ ಅವರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿಯಾಗಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಡ್ರಗ್ಸ್ ಪ್ರಕರಣ: ರಾಜ್ಯದ ಪೊಲೀಸ್ ವ್ಯವಸ್ಥೆ ಬಗ್ಗೆ ಸಂಸದ ಯದುವೀರ್ ಅಸಮಾಧಾನ

August 4, 2025
ಮುಖಪುಟ

ಶ್ರೀಗಂಧದ ತುಂಡು ಸಾಗಿಸ್ತಿದ್ದ ನಕಲಿ ಪತ್ರಕರ್ತನ​ ಬಂಧನ

March 20, 2024
ಬೆಂಗಳೂರುಮುಖಪುಟಸನ್ನಿಧಾನಸನ್ನಿಧಾನ

ಪವಿತ್ರ ವೈಕುಂಠ ಏಕಾದಶಿ ಮಹತ್ವದ ಬಗ್ಗೆ ನಿಮಗೆಷ್ಟು ಗೊತ್ತು..? ಭಗವಂತ ವಿಷ್ಣುವಿನ ಆರಾಧನೆಯಿಂದ ಸಿಗುವ ಫಲಗಳೇನು..?

January 9, 2025
ಮುಖಪುಟಮೈಸೂರು ನಗರ

ಮೈಸೂರು : ನಗರದ ಹೃದಯದ ಭಾಗದಲ್ಲಿ ರಾತ್ರೋರಾತ್ರಿ ಧರೆಗುರುಳಿದ 40 ಬೃಹತ್‌ ಮರಗಳು : ಸಾರ್ವಜನಿಕರ ಆಕ್ರೋಶ..!

April 14, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?