PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅರಣ್ಯ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಅರಣ್ಯ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು
ಮೈಸೂರು ಗ್ರಾಮಾಂತರ

ಅರಣ್ಯ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು

ಪ್ರತಿನಿಧಿ
Last updated: March 31, 2024 4:46 pm
ಪ್ರತಿನಿಧಿ
Published March 30, 2024
Share
SHARE

ಪ್ರತಿನಿಧಿ ವರದಿ ಎಚ್.ಡಿ.ಕೋಟೆ

ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ತಾಲೂಕಿನ ಗಡಿಭಾಗದ ಬಾವಲಿ ಹಾಡಿಯ ನಿವಾಸಿಗಳು ಅಬಕಾರಿ ಜಿಲ್ಲಾಧಿಕಾರಿ ಮಹಾದೇವಿ ಬಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಗುರುವಾರ ಗಡಿಭಾಗದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಅಬಕಾರಿ ಇಲಾಖೆ ವತಿಯಿಂದ ತೆರೆಯಲಾಗಿರುವ ಚೆಕ್ ಪೋಸ್ಟ್ ಗೆ ಬೇಟಿ ನೀಡಿದ್ದ ಸಂದರ್ಭದಲ್ಲಿ ಆದಿವಾಸಿ ಜನರು ಅಬಕಾರಿ ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿ ಹಾಡಿಯಿಂದ 50, 100 ಮೀಟರ್ ದೂರದಲ್ಲಿ ನಿಯಮಬಾಹಿರವಾಗಿ ಅಬಕಾರಿ ಆಯುಕ್ತರಾದ ಮಂಜುನಾಥ್ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರೆಸಾರ್ಟ್ ನಲ್ಲಿ ಮದ್ಯದ ಅಂಗಡಿ ತೆರೆದು ಹೊರಗಡೆಯಿಂದ ಬರುವವರಿಗೆ ಮದ್ಯ ಮಾರಟ ಮಾಡಿಸುತ್ತಿದ್ದಾರೆ ಎಂದು ಹಾಡಿ ನಿವಾಸಿಗಳು  ದೂರಿದರು.

ಮದ್ಯದ ಅಮಲಿನಲ್ಲಿ ಹಾಡಿಯ ಮನೆಯ ಹತ್ತಿರ ಕೂಗಾಟ, ರಂಪಾಟ ಮಾಡುತ್ತಿದ್ದಾರೆ. ಇದರಿಂದ ಹಾಡಿಯ ಹೆಣ್ಣುಮಕ್ಕಳು, ಶಾಲಾ ವಿಧ್ಯಾರ್ಥಿಗಳು ರಸ್ತೆಯಲ್ಲಿ ತಿರುಗಾಡಲು ತುಂಬಾ ತೊಂದರೆ ಆಗಿದೆ. ಅಲ್ಲದೆ ಪಕ್ಕದ ಕೇರಳ ರಾಜ್ಯದ ಜನರು ರೆಸಾರ್ಟ್ ಗೆ ಮದ್ಯ ಕುಡಿಯಲು ಬಂದು ಕುಡಿದ ಮತ್ತಿನಲ್ಲಿ ನಮ್ಮಗಳ ಮೇಲೆ ಈಗಾಗಲೇ ದೈಹಿಕವಾಗಿ ಹಲ್ಲೇ ಮಾಡುತ್ತಿರುತ್ತಾರೆ. ನಮ್ಮ ಜನರು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣ ಆಗಿದ್ದು,ಯಾವುದೇ ಕಾರಣಕ್ಕೂ ಗಡಿಭಾಗದಲ್ಲಿ ಮದ್ಯದ ಅಂಗಡಿ ನಡೆಸಲು ಅನುಮತಿ ನೀಡಬಾರದು. ಈಗಾಗಲೇ ಅನುಮತಿ ನೀಡಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ತೆರವು ಗೊಳಿಸಬೇಕು ಎಂದು ಒತ್ತಾಯಿಸಿದರು.

- ಜಾಹೀರಾತು -

ಹಾಡಿಯ ನಿವಾಸಿ ಸುಬ್ರಹ್ಮಣ್ಯ ಮಾತನಾಡಿದರು.

ನಂತರ ಮಾತನಾಡಿದ ಅಬಕಾರಿ ಡಿಸಿ ಮಹಾದೇವಿ ಬಾಯಿ ಅವರು ಈಗಾಗಲೇ ಗಲಾಟೆ ನಡೆದಿರುವ ವಿಚಾರ ಗಮನಕ್ಕೆ ಬಂದಿದ್ದು, ರೆಸಾರ್ಟ್ ನ ಪಕ್ಕದ ಗೇಟ್ ಹೊಡೆದು ಮದ್ಯ ಮಾರಟ ಮಾಡುತ್ತಿರುವ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಅಬಕಾರಿ ಡಿವೈಎಸ್ಪಿ ವಿಕ್ರಮ್, ಅಬಕಾರಿ ನಿರೀಕ್ಷಕಿ ದಿವ್ಯ ಶ್ರೀ, ಹಾಡಿಯ ನಿವಾಸಿಗಳಾದ ಜಯಮ್ಮ, ಭಾಗ್ಯ, ಸಿ.ಕೆ.ರಾಜು, ಮಹೇಶ್, ರಾಜೇಶ, ಸಣ್ಣಪ್ಪ, ಸುಬ್ಬು, ಚಂದ್ರು, ಚಿನ್ನಪ್ಪ, ಜಯಮ್ಮ ಸರೋಜಿನಿ, ನಾಗೇಶ್, ಅಮ್ಮಣ್ಣಿ, ಸುಂದ್ರಿ, ರುಕ್ಮಿಣಿ, ದೀಪು, ಜಾನು, ಮಾರೇ, ಕಾಳಿ, ಬಿಂದು ಲೀಲೆ ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ಸರ್ಕಾರಿ ಕಾಲುವೆ ಮುಚ್ಚಿ ಹಾಕಲು ಪ್ರಭಾವಿಗಳ ಯತ್ನ : ಅಧಿಕಾರಿಗಳಿಗೆ ರೈತರ ಖಡಕ್‌ ಎಚ್ಚರಿಕೆ..!

April 12, 2025
ಮುಖಪುಟಮೈಸೂರು ಗ್ರಾಮಾಂತರ

ಹಳಿತಪ್ಪಿದ ಅವಳಿ ತಾಲೂಕಿನ ಆಡಳಿತ

June 22, 2024
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ಸರ್ಕಾರದಿಂದ ಮಾದಿಗ ಸಮುದಾಯ ನಿರ್ಲಕ್ಷ್ಯ : ನಟ ಅರ್ಜುನ್ ಕಿಡಿ

March 3, 2025
ಮುಖಪುಟಮೈಸೂರು ಗ್ರಾಮಾಂತರ

ಗುಂಡ್ಲುಪೇಟೆಯ ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಬಿದ್ದ ಎರಡು ಚಿರತೆ

March 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?