PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ
ಮುಖಪುಟಮೈಸೂರು ನಗರ

ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ

Prathinidhi News
Last updated: December 2, 2025 4:14 pm
Prathinidhi News
Published December 2, 2025
Share
SHARE

ಮೈಸೂರು, ಡಿಸೆಂಬರ್‌ 2, 2025 : ಮೈಸೂರು ತಹಶೀಲ್ದಾರ್ ಮಹೇಶ್ ಅವರ ವಿರುದ್ಧ ಭೂ ಮಾಫಿಯಾಗಳಿಗೆ ಸಾಥ್ ನೀಡುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿಯ ಸರ್ವೇ ನಂಬರ್ 121 ರ ನಾಲ್ಕು ಎಕರೆ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ, ಸುಮಾರು 80 ವರ್ಷಗಳಿಂದ ಭೂಮಿ ಮೇಲೆ ಹಕ್ಕನ್ನು ಹೊಂದಿರುವ ರೈತರ ಕುಟುಂಬವನ್ನು ಏಕಾಏಕಿ ಒಕ್ಕಲೆಬ್ಬಿಸಲು ಯತ್ನಿಸಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಜಮೀನು 1951 ರಲ್ಲಿ ಹರಾಜು ಮೂಲಕ ಸಣ್ಣೇಗೌಡ ಕುಟುಂಬಕ್ಕೆ ಬಂದಿತ್ತು. ಸಣ್ಣೇಗೌಡರ ಮರಣದ ನಂತರ, ಈ ಜಮೀನಿನ ಪೌತಿ ಖಾತೆಯನ್ನು ಅವರ ಕುಟುಂಬಸ್ಥರಾದ ಕೃಷ್ಣೇಗೌಡ, ಸಣ್ಣಮ್ಮ, ಯಶೋಧಮ್ಮ ಮತ್ತು ರವಿಕುಮಾರ್ ಜೆ ಅವರ ಹೆಸರಿಗೆ ಮಾಡಲಾಗಿತ್ತು. ಆದರೆ, ಇದೀಗ ತಹಶೀಲ್ದಾರ್ ಮಹೇಶ್ ಅವರು ಈ ಖಾತೆಯನ್ನು ಏಕಾಏಕಿ ರದ್ದುಪಡಿಸಿದ್ದಾರೆ ಎಂಬ ಆರೋಪವಿದೆ.

ಮಹೇಶ್ ಶ್ಯಾಮಣ್ಣ ಎಂಬುವವರು 2006 ರಲ್ಲಿ ಇದೇ ಸರ್ವೇ ನಂಬರ್ 121 ರಲ್ಲಿ ನಾಲ್ಕು ಎಕರೆ ಜಮೀನನ್ನು ಖರೀದಿಸಿರುವುದಾಗಿ ಹೇಳಿಕೊಂಡಿದ್ದು, ಕಳೆದ 25 ವರ್ಷಗಳಿಂದ ಭೂಮಿಯ ಕಡೆ ಸುಳಿಯದ ಇವರು ಈಗ ದಿಢೀರ್ ರೈತರ ಜಮೀನಿಗೆ ಪ್ರವೇಶಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ತಹಶೀಲ್ದಾರ್ ಮಹೇಶ್ ಅವರು ರೈತರ ಪರ ನಿಲ್ಲದೇ ಉಳ್ಳವರ ಬೆನ್ನಿಗೆ ನಿಂತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಈ ಭೂ ವ್ಯಾಜ್ಯ ಸಿವಿಲ್ ಕೇಸ್ ಆಗಿದ್ದರೂ ಸಹ, ಕಾನೂನು ಬಾಹಿರವಾಗಿ ಪೊಲೀಸರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ರೈತರು ದಾಖಲೆಗಳನ್ನು ತೋರಿಸಿದರೂ ಸಹ, ತಹಶೀಲ್ದಾರ್ ಮತ್ತು ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರ್ ಮಹೇಶ್ ಅವರೇ ಹಿಂದೆ ಸ್ಥಳ ಪರಿಶೀಲನೆ ನಡೆಸಿದ್ದರೂ ಸಹ, ಇದೀಗ ಯಾವುದೇ ನೋಟಿಸ್ ನೀಡದೇ ಏಕಾಏಕಿ ಖಾತೆ ಕ್ಯಾನ್ಸಲ್ ಮಾಡಿರುವುದು ಅವರ ನಡೆಯ ಮೇಲೆ ಅನುಮಾನಗಳಿಗೆ ಎಡೆಮಾಡಿದೆ. ಅಕ್ರಮಕ್ಕೆ ಸಾಥ್ ಕೊಡಲು ತಹಶೀಲ್ದಾರ್ ಮುಂದಾಗಿದ್ದಾರೆ ಎಂದು ಆರೋಪಿಸಿರುವ ರೈತ ಕುಟುಂಬವು, ಅವರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಏಕತೆಗಾಗಿ ನಡಿಗೆ : ಸರ್ದಾರ್ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್

November 15, 2025
ಮುಖಪುಟಮೈಸೂರು ನಗರ

ಮಾಜಿ MLC ಸಿದ್ದರಾಜು ಕೋಟ್ಯಾಂತರ ಆಸ್ತಿ ಮೇಲೆ ಭೂಗಳ್ಳರ ಕಣ್ಣು ! ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೋಂದಣಿಗೆ ಯತ್ನ..!

December 24, 2025
ಮುಖಪುಟಮೈಸೂರು ನಗರಸಿನಿಮಾ

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ರಾಘವೇಂದ್ರ ರಾಜ್‌ಕುಮಾರ್ ಮತ್ತು ಮೇಘನಾ ರಾಜ್‌ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ!

November 4, 2025
ಬೆಂಗಳೂರುಮುಖಪುಟಮೈಸೂರು ನಗರ

ಮೈಸೂರಿಗೆ ಮತ್ತೊಂದು ಗರಿಮೆ ; ಸ್ಥಾಪನೆಯಾಗಲಿದೆ ಭಾರತದ ಮೊದಲ ರೇಷ್ಮೆ ಮ್ಯೂಸಿಯಂ.!

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?