PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜಕೀಯ ಬೆಳವಣಿಗೆಯಿಂದ ಆಘಾತವಾಗಿದೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ರಾಜಕೀಯ ಬೆಳವಣಿಗೆಯಿಂದ ಆಘಾತವಾಗಿದೆ
ಸಮಗ್ರ

ರಾಜಕೀಯ ಬೆಳವಣಿಗೆಯಿಂದ ಆಘಾತವಾಗಿದೆ

ಪ್ರತಿನಿಧಿ
Last updated: March 29, 2024 6:04 pm
ಪ್ರತಿನಿಧಿ
Published March 29, 2024
Share
SHARE

 

ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿಕೆ

ಪ್ರತಿನಿಧಿ ವರದಿ ದೇವನಹಳ್ಳಿ

- ಜಾಹೀರಾತು -

ರವಿ ಕಾಣದ್ದನ್ನಾ ಕವಿ ಕಂಡ ಎಂಬ ಗಾದೆ ಮಾತಿನಂತೆ ಕೋಲಾರ ಲೋಕಸಭಾ ಕ್ಷೇತ್ರದ ಬಿಕ್ಕಟ್ಟಿನ ಹಿಂದೆ ಯಾರಿದ್ದಾರೆ ಎಂಬುದನ್ನು ಮಾಧ್ಯಮದವರೇ ಹುಡಕಬೇಕು ಇಂತಹ ರಾಜಕೀಯ ಬೆಳವಣಿಗೆಗಳಿಂದ ಮನಸ್ಸಿಗೆ ಅಘಾತವಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, ನಾನು ಕೇಂದ್ರದಲ್ಲಿ 40 ವರ್ಷಗಳ ಕಾಲ ರಾಜಕೀಯ ಮಾಡಿರುವವನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ನನಗೆ ತವರು ಮನೆ ಇದ್ದಂತೆ. ನಾನು ಮಾತು ಕೊಟ್ಟಿದ್ದೇನೆ ಎರಡು ಕ್ಷೇತ್ರದಲ್ಲಿ ನಾನು ಅಭ್ಯರ್ಥಿಗಳನ್ನು ಗೆಲ್ಲಿಸಿಕೋಂಡು ಬರುತ್ತೇನೆ ಎಂದಿದ್ದೇನೆ ಆದರೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ.

ಪ್ರಸ್ತುತ ಬೆಳವಣಿಗೆಗಳಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ನಮಗೆ ದೊಡ್ಡದು ನನಗೆ ಎಲ್ಲ ಅಧಿಕಾರವನ್ನು ಕಲ್ಪಿಸಿದ್ದು, ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಕೋಲಾರ ‌ಲೊಕಸಭೆಯಲ್ಲಿ ಈ ಬಾರಿ ನಾವು ಜಯಗಳಿಸ ಬೇಕಾಗಿರುವುದರಿಂದ ನಮ್ಮ ಕುಟುಂಬದ ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ಕೇಳಿದ್ದು ಹೈಕಮಾಂಡ್ ನೀಡುವ ಆಶಾಭಾವನೆ ಹೊಂದಿದ್ದೇನೆ ಎಂದರು.

ಕೋಲಾರದ ಬಿಕ್ಕಟ್ಟು ನಿವಾರಿಸುವಲ್ಲಿ ಎಐಸಿಸಿ ಅಧ್ಯಕ್ಷರಾದಿಯಾಗಿ ನನಗೆ ಸಮ್ಮತಿ ಸೂಚಿಸಿದ್ದು, ಮುಖ್ಯಮಂತ್ರಿ ಯವರ ನಿರ್ಧಾರ ರಿಸಲ್ಟ್ ಓರಿಯಂಟೇಡ್ ಅಲ್ಲಾ…. ಇಗಲೂ ಕಾಲ ಮಿಂಚಿಲ್ಲ ನಮಗೆ ಟಿಕೆಟ್ ನೀಡಿದರೆ ನಾವೆಲ್ಲ ಗೆಲ್ಲಿಸಿ ಕೊಂಡು ಬರುತ್ತೇವೆ. ಶ್ರೀನಿವಾಸ ಪುರದ ಮಾಜಿ ಸಚಿವ ರಮೇಶ್ ಕುಮಾರ್ ಅವರ ಮನೆಗೆ ನಾನೇ ಖುದ್ದಾಗಿ ಬೇಟಿ ನೀಡಿದ್ದು, ಅವರು ಅನಾರೋಗ್ಯದ ಕಾರಣ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲಾ .

ರಮೇಶ ಕುಮಾರ್ ಅವರನ್ನು ಕೇಳಿ ನಿರ್ಧಾರ ಮಾಡಲಿ. ಅವರಿಗೂ ಬೇಡ ಇವರಿಗೂ ಬೇಡ ಎಂದರೆ ಅಭ್ಯರ್ಥಿಯ ಗೆಲವು ಕಷ್ಟಕರವಾಗಲಿದೆ. ನಾನು ಯಾವ ನಾಯಕರ ವಿರುದ್ಧವೂ ಕೆಲಸ ಮಾಡಿಲ್ಲ. ಸಚಿವ ಗಿರಿಗೆ ವಿರೋಧಿಸಿಲ್ಲ. ಶಾಸಕರಾಗಲು ಸಹಕರಿಸಿದ್ದೇನೆ.

ನಮ್ಮ ಕುಟುಂಬಕ್ಕೆ ಟಿಕೆಟ್ ನೀಡಿದ್ದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಕೋಲಾರ ಲೋಕಸಭಾ ಕ್ಷೇತ್ರ ಗೆಲ್ಲಿಸಿ ಕೊಂಡುಬರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮನಸ್ಸು ಮಾಡಿದರೆ ಉತ್ತಮ ಫಲಿತಾಂಶ ನಮ್ಮ ಪರವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ದಸಂಸ ವತಿಯಿಂದ ಅಂಬೇಡ್ಕರ್ ದಿನಾಚರಣೆ

April 17, 2024
ಸಮಗ್ರ

ಅಮಾನಿಕೆರೆಯಲ್ಲಿ ರಾಸಾಯನಿಕ ಮಿಶ್ರಣ

June 7, 2024
ಸಮಗ್ರ

ಧ್ಯಾನ, ಯೋಗ್ಯದ ಜತೆ ಪೌಷ್ಟಿಕ ಆಹಾರ ಸೇವಿಸಿ

June 12, 2024
ಸಮಗ್ರ

ಕಾಲ ಮಿತಿಯೊಳಗೆ ಸಮಸ್ಯೆ ಪರಿಹರಿಸಿ

July 9, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?