ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ತಡರಾತ್ರಿ ಸಭೆ ನಡೆಸಿದರು. ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ತಂತ್ರಗಾರಿಕೆ ಕುರಿತು ಸುದೀರ್ಘ ಮಾತುಕತೆ ನಡೆಸಲಾಯಿತು. ಸಚಿವ ಚಲುವರಾಯಸ್ವಾಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮತ್ತು ಕೆಲ ಪ್ರಮುಖ ನಾಯಕರು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಒಕ್ಕಲಿಗರು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಾಯಿತು. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಬಹುದು ಎಂಬ ಮಾಹಿತಿ ಸಂಗ್ರಹ ಮಾಡಲಾಯಿತು. ಅಲ್ಲದೆ, JDS, ಬಿಜೆಪಿ ಮೈತ್ರಿ ಮಣಿಸಲು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ಕೂಡ ನಡೆದಿದೆ ಎನ್ನಲಾಗುತ್ತಿದೆ.
![](https://www.prathinidhi.net/wp-content/uploads/2023/09/Siddaramaiah-DK-Shivakumar-1.webp)