ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಮೂವರು ಹಿರಿಯ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಘಟಿಕೋತ್ಸವ ದಲ್ಲಿ ಪದ್ಮ ವಿಭೂಷಣ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ನಾಡೋಜ ಡಾ.ಭಾಷ್ಯ ಸ್ವಾಮೀಜಿ, ಶಿಕ್ಷಣ ತಜ್ಞ ಎಂ ಆರ್ ಸೀತಾರಾಮ್ ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್ ಕೆ ಲೋಕನಾಥ್ ಮಾಹಿತಿ ನೀಡಿದರು. ಅಲ್ಲದೆ ಈ ಬಾರಿಯ ಘಟಿಕೋತ್ಸವದಲ್ಲಿ 32,249 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನ ಪ್ರದಾನ ಮಾಡಲಾಗುತ್ತಿದೆ.ಈ ಪೈಕಿ 19,992 ಮಹಿಳೆಯರು, 12,257 ಪುರುಷರಿಗೆ ಪದವಿಗಳನ್ನ ನೀಡಲಾಗುವುದು. ಒಟ್ಟು 436 ಪದಕಗಳು ಮತ್ತು 266 ಬಹುಮಾನಗಳು 252 ಅಭ್ಯರ್ಥಿಗಳಿಗೆ ಪ್ರದಾನ ಮಾಡಲಾಗುತ್ತದೆ. ಜೊತೆಗೆ 6,144 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿಗಳು & 26,009 ಅಭ್ಯರ್ಥಿಗಳಿಗೆ ಸ್ನಾತಕ ಪದವಿಗಳು ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
![](https://www.prathinidhi.net/wp-content/uploads/2024/03/vvs.jpg)