PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಭಿವೃದ್ಧಿ ಕುಂಠಿತ, ಅಧಿಕಾರ ಹಂಚಿಕೆ ಗೊಂದಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಅಭಿವೃದ್ಧಿ ಕುಂಠಿತ, ಅಧಿಕಾರ ಹಂಚಿಕೆ ಗೊಂದಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ
ಮುಖಪುಟಮೈಸೂರು ನಗರರಾಜಕೀಯ

ಅಭಿವೃದ್ಧಿ ಕುಂಠಿತ, ಅಧಿಕಾರ ಹಂಚಿಕೆ ಗೊಂದಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ

Prathinidhi News
Last updated: November 22, 2025 12:43 pm
Prathinidhi News
Published November 22, 2025
Share
SHARE

ಮೈಸೂರು, ನವೆಂಬರ್‌ 22, 2025: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಇದಕ್ಕೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಪವರ್ ಶೇರಿಂಗ್’ ಚರ್ಚೆಗಳೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಿನನಿತ್ಯ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯ ಪ್ರವೇಶಿಸಬೇಕು ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಶ್ವನಾಥ್ ಆಗ್ರಹಿಸಿದ್ದಾರೆ.

Contents
ಮೈಸೂರು, ನವೆಂಬರ್‌ 22, 2025: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಇದಕ್ಕೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಪವರ್ ಶೇರಿಂಗ್’ ಚರ್ಚೆಗಳೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್‌ನ್ನೇ ಮುಗಿಸಲು ಮುಂದಾದ ಸಿದ್ದರಾಮಯ್ಯ?ರಾಜ್ಯ ಸಾಲದ ಕೂಪಕ್ಕೆ, ರಸ್ತೆಗಳು ಗುಂಡಿಮಯಮದ್ಯದ ಬೆಲೆ ಏರಿಕೆ: ಯುವ ಸಮುದಾಯ ಗಾಂಜಾ ಸೇವನೆಗೆ ಮೊರೆಅಧಿಕಾರ ಹಂಚಿಕೆ ಆಣೆ-ಪ್ರಮಾಣ: ಮೌನವೇಕೆ?

ಕಾಂಗ್ರೆಸ್‌ನ್ನೇ ಮುಗಿಸಲು ಮುಂದಾದ ಸಿದ್ದರಾಮಯ್ಯ?

ಜೆಡಿಎಸ್‌ನಿಂದ ಸಿದ್ದರಾಮಯ್ಯ ಅವರನ್ನು ಹೊರಹಾಕಿದಾಗ ಆಶ್ರಯ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಾರ್ಟಿಯನ್ನೇ ಮುಗಿಸಲು ಮುಂದಾಗಿದ್ದಾರೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.

ಈ ರಾಜ್ಯದಲ್ಲಿ ವಚನ ಭ್ರಷ್ಟರಾದವರು ಯಾರು ಕೂಡ ಉಳಿದಿಲ್ಲ, ಎಂದು ಅವರು “ಧರಣಿ ಮಂಡಲ ಮಧ್ಯದೊಳಗೆ” ಪದ್ಯವನ್ನು ಉಲ್ಲೇಖಿಸಿ ಟೀಕಿಸಿದರು. ವ್ಯಾಘ್ರಕ್ಕೆ ಮಾತು ಕೊಟ್ಟು ಹಸು ನುಡಿದಂತೆ ನಡೆದುಕೊಂಡ ನಾಡು ನಮ್ಮದು. ಕುರುಬರು ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ,ಎಂದು ಹೇಳಿದ ಅವರು, ಸಿದ್ದರಾಮಯ್ಯ ಅವರು ಕುರುಬ ಸಮಾಜದ ಹೆಸರನ್ನು ಕೂಡ ಹಾಳು ಮಾಡುತ್ತಿದ್ದಾರೆ, ಎಂದು ಆಕ್ರೋಶ ವ್ಯಕ್ತಪಡಿಸಿದರು. ಕುರುಬರಿಗೆ ಏನನ್ನೂ ಮಾಡದ ಸಿದ್ದರಾಮಯ್ಯ ಎಲ್ಲಾ ಮಾಡಿದ್ದು ನಾನೇ ಎನ್ನುತ್ತಿರುವುದು ದುರಹಂಕಾರ, ಎಂದು ಅವರು ಖಂಡಿಸಿದರು.

ರಾಜ್ಯ ಸಾಲದ ಕೂಪಕ್ಕೆ, ರಸ್ತೆಗಳು ಗುಂಡಿಮಯ

ಪ್ರಧಾನಿ ಮೋದಿಯವರು 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ಅವರು ಬರೀ “ಬೊಗಳೆ ಹೊಡೆದುಕೊಂಡು ಓಡಾಡುತ್ತಿದ್ದಾರೆ” ಎಂದು ವಿಶ್ವನಾಥ್ ತೀವ್ರವಾಗಿ ಟೀಕಿಸಿದರು.ಸಿದ್ದರಾಮಯ್ಯ ಅವರು ಅತಿ ಹೆಚ್ಚು ಸಾಲ ಮಾಡುವ ಮೂಲಕ ರಾಜ್ಯವನ್ನು ಸಾಲದ ಕೂಪಕ್ಕೆ ದೂಡಿದ್ದಾರೆ. ಸಾಲ ತೆಗೆದುಕೊಂಡು ಬಂದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತಿದ್ದಾರೆ. ಹಣಕಾಸಿನ ಮಂತ್ರಿಯಾಗಿರುವ ಅವರಿಗೆ ಹಣದ ಬೆಲೆ ಗೊತ್ತಿಲ್ಲ ಎಂದು ದೂರಿದರು.ರಾಜ್ಯದಾದ್ಯಂತ ರಸ್ತೆಗಳು ಗುಂಡಿ ಬಿದ್ದು ಹೋಗಿವೆ. ಗುಂಡಿ ಬಿದ್ದು ಹೋಗಿರುವ ರಾಜ್ಯದ ಭಂಡ ನಾಯಕ ಸಿದ್ದರಾಮಯ್ಯ, ಎಂದು ಟೀಕಾ ಪ್ರಹಾರ ನಡೆಸಿದರು.

- ಜಾಹೀರಾತು -

ಮದ್ಯದ ಬೆಲೆ ಏರಿಕೆ: ಯುವ ಸಮುದಾಯ ಗಾಂಜಾ ಸೇವನೆಗೆ ಮೊರೆ

ಮದ್ಯದ ಬೆಲೆ ಏರಿಕೆಯಿಂದಾಗಿ ಯುವ ಸಮುದಾಯ ಹಾಳಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ವಿಶ್ವನಾಥ್, ಮದ್ಯದ ಬೆಲೆ ದುಬಾರಿಯಾಗಿರುವುದರಿಂದ ಯುವಕರು ಗಾಂಜಾ ಸೇವನೆಯ ಮೊರೆ ಹೋಗುತ್ತಿದ್ದಾರೆ ಎಂದು ಹೇಳಿದರು.

ಅಧಿಕಾರ ಹಂಚಿಕೆ ಆಣೆ-ಪ್ರಮಾಣ: ಮೌನವೇಕೆ?

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಚಾರದಲ್ಲಿ ಐಎಸಿಸಿ ಅಧ್ಯಕ್ಷರ ಸಮಕ್ಷಮದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಸಹೋದರರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರು ಉಪಸ್ಥಿತರಿದ್ದರು. ಆದರೆ ಈ ಬಗ್ಗೆ ಯಾರೊಬ್ಬರೂ ಈಗ ಬಾಯಿ ಬಿಡುತ್ತಿಲ್ಲ ಎಂದು ವಿಶ್ವನಾಥ್ ಬಹಿರಂಗಪಡಿಸಿದರು. ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಾರ್ಟಿ ಧೂಳೀಪಟವಾಗಲಿದೆ, ಎಂದು ಎಚ್ಚರಿಕೆ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಜನವರಿ 7 ರಂದು “ಸಿದ್ದು”ಗೆ ಮಹತ್ವದ ದಿನ ಯಾಕೆ..? ನ್ಯೂ ಇಯರ್ ಗೆ ಸಿಎಂ ಸಿದ್ದರಾಮಯ್ಯ ಹೊಸ ರೆಕಾರ್ಡ್..!

December 31, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಕಿರುಕುಳ: ಯೂಟ್ಯೂಬರ್ ಬಂಧನ

January 2, 2026
ಬೆಂಗಳೂರುಮುಖಪುಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಡಿ. 11 ರವರೆಗೂ ವ್ಯಾಪಕ ಮಳೆ !

December 8, 2025
ಬೆಂಗಳೂರುಮುಖಪುಟಸಿನಿಮಾ

“TOXIC” ಟೀಸರ್ ನಲ್ಲಿ ರಾಕಿಂಗ್ ಸ್ಟಾರ್ ಲವ್ಲಿ ಲುಕ್..! ಹಾಲಿವುಡ್ ರೇಂಜ್ ನಲ್ಲಿ ನಟ ಯಶ್ ನಟನೆಯ ಫಿಲಂ..!

January 8, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?