ದೇವನಹಳ್ಳಿ/ವಿಜಯಪುರ: ಪಟ್ಟಣದ ಬೈಪಾಸ್ ರಸ್ತೆಯ ಗೀತಾ ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ದೇವನಹಳ್ಳಿ ತಾಲೂಕಿನಿಂದ 25 ಸಾವಿರ ಲೀಡ್ ಕೊಡಬೇಕು. ಆಗ ರಸ್ತೆ ನಿರ್ಮಿಸಲು ಹಾಗೂ ನೀರಿನ ಬವಣೆ ನೀಗಿಸಲು ಕೆರೆಗಳಲ್ಲಿ ನೀರು ಉಳಿಯಲು ಹೂಳೆತ್ತುವ ಕೆಲಸಕ್ಕೆ ಹಣ ಕ್ರೋಢಿಕರಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಎಲ್ಲವನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳುತ್ತೇವೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆ ಪಡೆದು ಅನುಕೂಲ ಪಡೆದಂತೆ ಕೇಂದ್ರದಿಂದಲೂ ಅನೇಕಯೋಜನೆಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಬೆಂಬಲಿಸಿ ಎಂದು ತಿಳಿಸಿದರು.
ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ರಾಜ್ಯದಲ್ಲಿ ಐದು ಗ್ಯಾರಂಟಿಗಳ ಯೋಜನೆ ಅನುಷ್ಠಾನ ಗೊಳಿಸಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ ಅದರಂತೆ ಕೇಂದ್ರದ ಗ್ಯಾರಂಟಿಗಳ ಉಪಯೋಗ ಪಡೆಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಜತೆಯಲ್ಲಿ ನಮ್ಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ನವರಿಗೆ ನಿಮ್ಮೆಲ್ಲರ ಮತ ಹಾಕಿ ದೆಹಲಿಗೆ ಕಳಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಬಿಜೆಪಿ ಸರ್ಕಾರ ಹಣವಂತರ ಪರವಾದ ಸರ್ಕಾರ ಅಂಬಾನಿ,ಅದಾನಿ, ಯಂತಹ ಬಂಡವಾಳ ಶಾಹಿಗಳ ಪರವಾಗಿ ಅವರಿಗೆ ಅನುಕೂಲವಾಗುವಂತೆ ತೆರಿಗೆ ವಿನಾಯಿತಿ ನೀಡುವುದು ಮಾಡಿದ್ದಾರೆ ರೈತರಿಗೆ ಸಾಲ ಮನ್ನಾ ಮಾಡಿಲ್ಲಾ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಮಧ್ಯಮ ಮತ್ತು ಬಡ ಜನರಿಗೆ ಅನುಕೂಲವಾದ ಆಡಳಿತ ನೀಡಿದ್ದು ಕಳೆದ ಹತ್ತು ವರ್ಷಗಳಿಂದ ಪೆಟ್ರೋಲ್ ಬೆಲೆ ದಿನನಿತ್ಯ ಬಳಕೆ ಮಾಡುವ ವಸ್ತುಗಳ ಮತ್ತು ಗ್ಯಾಸ್ ಬೆಲೆ ಕೈಗೆಟುಕದಂತೆ ಮಾಡಿರುವ ಸಾಧನೆ ಬಿಜೆಪಿ ಪಕ್ಷಕ್ಕೆ ಸೇರಿದ್ದಾಗಿದೆ ಎಂದುಲೇವಡಿ ಮಾಡಿದರು.
ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಮುಭಾರಕ್,ಟೌನ್ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಮಂಜುನಾಥ್, ಪುರಸಭಾ ಸದಸ್ಯರು ಇದ್ದರು.
1804ವಿಜೆಆರ್ ಪಿ: ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯ ಗೀತಾ ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದರು.