PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಡೆಂಘೆ, ಮಲೇರಿಯಾ ನಿಯಂತ್ರಣಕ್ಕೆ ಕ್ರಮವಹಿಸಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಹಾಸನ > ಡೆಂಘೆ, ಮಲೇರಿಯಾ ನಿಯಂತ್ರಣಕ್ಕೆ ಕ್ರಮವಹಿಸಿ
ಹಾಸನ

ಡೆಂಘೆ, ಮಲೇರಿಯಾ ನಿಯಂತ್ರಣಕ್ಕೆ ಕ್ರಮವಹಿಸಿ

ಪ್ರತಿನಿಧಿ
Last updated: June 1, 2024 7:47 pm
ಪ್ರತಿನಿಧಿ
Published June 1, 2024
Share
SHARE
  •  ಅಧಿಕಾರಿಗಳಿಗೆ ತಹಸೀಲ್ದಾರ್ ಎಂ.ಮಮತಾ ಸೂಚನೆ

ಪ್ರತಿನಿಧಿ ವರದಿ ಬೇಲೂರು

ತಾಲೂಕಿನಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಧಿಕಾರಿಗಳು ಕೂಡಲೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಎಂ.ಮಮತಾ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಘೆ ನಿಯಂತ್ರಣ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಮಳೆಗಾಲ ಸಮೀಪಿಸುತ್ತಿರುವುದರಿಂದ ಹೆಚ್ಚಾಗಿ ಡೆಂಘೆ ಪ್ರಕರಣಗಳು ವ್ಯಾಪಕವಾಗಿ ಕಾಣಿಸುತ್ತಿರುವುದರಿಂದ ತಾಲೂಕಿನಲ್ಲಿ ಸುಮಾರು ೧೦ ಡೆಂಘೆ ಪ್ರಕರಣಗಳು ದಾಖಲಾಗಿದೆ. ಇದರ ಜತೆಗೆ ಚಿಕೂನ್‌ ಗೂನ್ಯ ಪ್ರಕರಣವು ದಾಖಲಾಗಿದೆ. ಡೆಂಘೆ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸುಮಾರು ೪೦ ಪ್ರಕರಣಗಳು ದಾಖಲಾಗಿದ್ದು, ಅವರಿಗೆ ಹೆಚ್ಚಿನ ರೀತಿಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದರು.

- ಜಾಹೀರಾತು -

ಜನಸಾಮಾನ್ಯರು ಹಾಗೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಗೆ  ಮೊದಲ ಆದ್ಯತೆ ನೀಡಬೇಕು. ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕೇವಲ ಒಂದು ದಿನ ಮಾತ್ರ ಸ್ವಚ್ಛಗೊಳಿಸಿದರೆ. ಸಾಲದು ಪಟ್ಟಣದ ೨೩ ವಾರ್ಡ್ ಗಳಲ್ಲೂ ಕಡ್ಡಾಯವಾಗಿ ಕ್ರಿಮಿನಾಶಕವನ್ನು ಸಿಂಪಡಿಸುವ ಮೂಲಕ ಸ್ವಚ್ಛತೆ ಮಾಡಬೇಕು. ಅಲ್ಲದೆ ಪುರಸಭೆ ವ್ಯಾಪ್ತೀಯಲ್ಲಿ ಬರುವ ಕೋಳಿ ಅಂಗಡಿಗಳಿಗೆ ಸೂಕ್ತ ನಿರ್ದೇಶನ ನೀಡಿ ತ್ಯಾಜ್ಯವನ್ನು ಪುರಸಭೆ ಗಾಡಿಗಳಿಗೆ ಹಾಕುವಂತೆ ಸೂಚಿಸಿದ್ದರು.

ನಿಮ್ಮ ವ್ಯಾಪ್ತಿಯಲ್ಲಿ ಬರುವ ಗ್ಯಾರೇಜ್ ಹಾಗೂ ಗುಜರಿ ವ್ಯಾಪಾರಿಗಳಿಗೆ ತಿಳಿವಳಿಕೆ ನೊಟೀಸ್ ನೀಡಿ ಯಾವುದೇ ವಸ್ತುವನ್ನು ಶೇಖರಣೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ರುಚಿ ಶುಚಿಗೆ ಹೆಚ್ಚಿನ ಆದ್ಯತೆ ಕೊಡಬೇಕು. ಇದರ ಜತೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಕುಡಿಯಲು ಬಿಸಿನೀರು, ಸೊಳ್ಳೆ ಪರದೆಗಳನ್ನು ವಿತರಿಸುವಂತೆ ಸೂಚಿಸಿದಲ್ಲದೆ ಎರಡು ದಿನಗಳಿಗೊಮ್ಮೆ ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಬೇಕು. ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಬಂದರೆ ನೇರವಾಗಿ ವಾರ್ಡ್ ನ್ ಗಳ ಮೇಲೆ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಕೈಗೊಳ್ಳುತ್ತೇನೆ ಎಂದರು.

ಶಾಲೆಗಳು ಪ್ರಾರಂಭವಾಗಿರುವುದರಿಂದ ಯಾವುದೇ ವಿದ್ಯಾರ್ಥಿಗಳಿಗೆ ಜ್ವರ ಕೆಮ್ಮು ಇನ್ನಿತರ ತೊಂದರೆ ಇದ್ದರೆ ಅದನ್ನು ಪೊಷಕರಿಗೆ ತಿಳಿಸಿ ಶಾಲೆಗಳಿಗೆ ಕಳಿಸದಂತೆ ಎಚ್ಚರಿಕೆ ನೀಡಬೇಕು. ಗ್ರಾಪಂನಲ್ಲಿ ಎಲ್ಲ ಪಿಡಿಒಗಳ ಸಹಕಾರ ಪಡೆದು ಪ್ರತಿಯೊಬ್ಬರೂ ಕಡ್ಡಾಯವಾಗಿ ಗ್ರಾಮಗಳಲ್ಲಿ ಸ್ವಚ್ಛತೆಗೆ  ಮೊದಲ ಆದ್ಯತೆ ನೀಡುವಂತೆ ಎಲ್ಲ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಅತಿ ಮುಖ್ಯ. ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಶಿಕ್ಷಕರು ಮನೆಮನೆಗೆ ಕರ ಪತ್ರ ನೀಡುವ ಮೂಲಕ ಜಾಗೃತಿ ಮಾಡಿಸಬೇಕು ಎಂದರು.

ಖಾಸಗಿ ಆಂಬುಲೆನ್ಸ್ ಚಾಲಕರಿಗೆ ಎಚ್ಚರಿಕೆ: ಆಬುಲೆನ್ಸ್ ಚಾಲಕರು ಸಾರ್ವಜನಿಕರಿಗೆ ತೊಂದರೆ ಕೊಡದಂತೆ ನಿಗಾವಹಿಸಬೇಕು ಹಾಗೂ ಪ್ರತಿ ವಾಹನಗಳಿಗೆ ಎಲ್ಲ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ, ಆರ್ ಟಿ ಒ ಅಧಿಕಾರಿಗಳಿಗೆ ತಿಳಿಸಿ ವಾಹನ ಜಪ್ತಿ ಮಾಡಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಾಬುಲೆನ್ಸ್ ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸದಂತೆ ಎಚ್ಚರಿಕೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಬಿಆರ್ ಸಿ ಶಿವಮರಿಯಪ್ಪ, ಪುರಸಭೆ ಮುಖ್ಯಾಧಿಕಾರಿ ಇಂದು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಬಿಸಿಎಂ ಅಧಿಕಾರಿಗಳು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಹಾಸನ

ಪೆನ್​ಡ್ರೈವ್ ಬಿಡುಗಡೆ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕಾರ್ತಿಕ್​​ ಸೇರಿ ಇತರರಿಗೆ ಬಂಧನ ಭೀತಿ

May 9, 2024
ಹಾಸನ

ಉಚಿತ ಆರೋಗ್ಯ ತಪಾಸಣಾ ಶಿಬಿರ

June 18, 2024
ಹಾಸನ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಕಸರತ್ತು

August 7, 2024
ಚುನಾವಣೆಮುಖಪುಟಹಾಸನ

Loksabha Elcetion Live update: ಬರಿಗಾಲಲ್ಲಿ ಬಂದು ವೋಟ್ ಮಾಡಿ ತೆರಳಿದ ಸಂಸದ ಪ್ರಜ್ವಲ್ ರೇವಣ್ಣ

April 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?