PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಆಸೀಸ್ ಎದುರು ಸತತ ಎರಡನೇ ಜಯದ ಮೇಲೆ ಟೀಂ ಇಂಡಿಯಾ ಕಣ್ಣು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಆಸೀಸ್ ಎದುರು ಸತತ ಎರಡನೇ ಜಯದ ಮೇಲೆ ಟೀಂ ಇಂಡಿಯಾ ಕಣ್ಣು
ಜಿಲ್ಲೆ

ಆಸೀಸ್ ಎದುರು ಸತತ ಎರಡನೇ ಜಯದ ಮೇಲೆ ಟೀಂ ಇಂಡಿಯಾ ಕಣ್ಣು

Prathinidhi News
Last updated: November 26, 2023 1:43 pm
Prathinidhi News
Published November 26, 2023
Share
SHARE

2024ರ ಟಿ20 ವಿಶ್ವಕಪ್‌ಗೆ ಈಗಾಗಲೇ ಸಿದ್ಧತೆ ಆರಂಭಿಸಿರುವ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಮತ್ತೊಂದು ಟಿ20 ಗೆಲುವಿನ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ತವಕದಲ್ಲಿದೆ. ಪಂದ್ಯಕ್ಕೆ ತಿರುವನಂತಪುರಂ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದು, ಆಸೀಸ್‌ ಸರಣಿ ಸಮಬಲಕ್ಕೆ ಎದುರು ನೋಡುತ್ತಿದೆ.

ಸೂರ್ಯಕುಮಾರ್‌ ಯಾದವ್‌ ನಾಯಕತ್ವದಲ್ಲಿ ಸರಣಿಯಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾ, ಸುಲಭವಾಗಿ ಗೆಲ್ಲಬಹುದಾಗಿದ್ದ ಆರಂಭಿಕ ಪಂದ್ಯದಲ್ಲಿ ಕೊನೆವರೆಗೆ ತಿಣುಕಾಡಿ ಜಯ ಸಾಧಿಸಿತ್ತು. ಪಂದ್ಯದಲ್ಲಿ ಬ್ಯಾಟರ್‌ಗಳು ಅಬ್ಬರಿಸಿದ್ದರೂ, ಬೌಲರ್‌ಗಳು ತೀರಾ ಕಳಪೆ ಪ್ರದರ್ಶನ ತೋರಿದ್ದರು. ಹೀಗಾಗಿ ಭಾನುವಾರದ ಪಂದ್ಯದಲ್ಲಿ ಬೌಲಿಂಗ್‌ ವಿಭಾಗದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಟೀಂ ಇಂಡಿಯಾದ ಮುಂದಿದೆ.

ಪ್ರಮುಖವಾಗಿ ಅರ್ಶ್‌ದೀಪ್‌ ಸಿಂಗ್, ಪ್ರಸಿದ್ಧ್‌ ಕೃಷ್ಣ, ರವಿ ಬಿಷ್ಣೋಯ್‌ ಭಾರತ ತಂಡದಲ್ಲಿ ಸ್ಥಾನ ಗಟ್ಟಿಸಿಗೊಳಿಸಬೇಕಿದ್ದರೆ ಈಗಿಂದಲೇ ಮೊನಚು ದಾಳಿ ಮೂಲಕ ಆಯ್ಕೆ ಸಮಿತಿಯ ಗಮನ ಸೆಳೆಯಬೇಕಿದೆ. ಆಸೀಸ್‌ ಬ್ಯಾಟರ್‌ಗಳು ಅಭೂತಪೂರ್ವ ಪ್ರದರ್ಶನ ನೀಡುತ್ತಿದ್ದು, ಅವರನ್ನು ಕಟ್ಟಿಹಾಕುವ ಜವಾಬ್ದಾರಿ ಭಾರತೀಯ ಬೌಲರ್‌ಗಳ ಮೇಲಿದೆ. ಇನ್ನು ಸೂರ್ಯ ಜೊತೆಗೆ ಇಶಾನ್‌ ಕಿಶನ್‌ ಆರಂಭಿಕ ಪಂದ್ಯದಲ್ಲಿ ಅಬ್ಬರಿಸಿದ್ದು, ಸಿಕ್ಕ ಅವಕಾಶ ಬಾಚಿಕೊಳ್ಳುತ್ತಿದ್ದಾರೆ. ಅವರ ಜೊತೆಗೆ ಯಶಸ್ವಿ ಜೈಸ್ವಾಲ್‌, ಋತುರಾಜ್‌, ತಿಲಕ್‌ ವರ್ಮಾ ಬ್ಯಾಟ್‌ನಿಂದ ದೊಡ್ಡ ಮೊತ್ತ ಹರಿದುಬರಬೇಕಿದೆ. ರಿಂಕು ಸಿಂಗ್‌ ಮೇಲೆ ಭಾರೀ ನಿರೀಕ್ಷೆ ಇಡಲಾಗಿದೆ.

ಪುಟಿದೇಳುತ್ತಾ ಆಸೀಸ್‌?: ಆರಂಭಿಕ ಪಂದ್ಯದಲ್ಲಿ ಸೋತ ಹೊರತಾಗಿಯೂ ಆಸೀಸ್‌, ಭಾರತಕ್ಕೆ ಮತ್ತೊಮ್ಮೆ ಕಠಿಣ ಸ್ಪರ್ಧೆ ನೀಡುವುದರಲ್ಲಿ ಅನುಮಾನವಿಲ್ಲ. ಜೋಸ್‌ ಇಂಗ್ಲಿಸ್‌, ಸ್ಟೀವ್‌ ಸ್ಮಿತ್‌ ಮತ್ತೆ ಅಬ್ಬರಿಸಲು ಕಾಯುತ್ತಿದ್ದು, ಮಾರ್ಕಸ್‌ ಸ್ಟೋಯ್ನಿಸ್‌, ಟಿಮ್‌ ಡೇವಿಡ್‌ ನಿರೀಕ್ಷೆ ಉಳಿಸಿಕೊಳ್ಳಬೇಕಿದೆ.

- ಜಾಹೀರಾತು -

ಒಟ್ಟು ಮುಖಾಮುಖಿ: 27

ಭಾರತ: 16

ಆಸ್ಟ್ರೇಲಿಯಾ: 10

ಫಲಿತಾಂಶವಿಲ್ಲ: 01

ಸಂಭವನೀಯ ಆಟಗಾರರ ಪಟ್ಟಿ

ಭಾರತ: ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್, ಇಶಾನ್‌ ಕಿಶನ್, ಸೂರ್ಯಕುಮಾರ್‌ ಕುಮಾರ್(ನಾಯಕ), ತಿಲಕ್‌ ವರ್ಮಾ, ರಿಂಕು ಸಿಂಗ್‌, ಅಕ್ಷರ್‌ ಪಟೇಲ್, ರವಿ ಬಿಷ್ಣೋಯ್‌, ಅರ್ಶ್‌ದೀಪ್‌ ಸಿಂಗ್, ಪ್ರಸಿದ್ಧ್‌ ಕೃಷ್ಣ, ಮುಕೇಶ್‌ ಕುಮಾರ್.

ಆಸ್ಟ್ರೇಲಿಯಾ: ಸ್ಟೀವ್ ಸ್ಮಿತ್‌, ಶಾರ್ಟ್‌, ಜೋಶ್ ಇಂಗ್ಲಿಸ್‌, ಆ್ಯರೋನ್‌ ಹಾರ್ಡಿ, ಮಾರ್ಕಸ್ ಸ್ಟೋಯ್ನಿಸ್‌, ಟಿಮ್ ಡೇವಿಡ್‌, ಮ್ಯಾಥ್ಯೂ ವೇಡ್‌(ನಾಯಕ), ಶಾನ್ ಅಬ್ಬಾಟ್‌, ಎಲ್ಲೀಸ್‌, ಜೇಸನ್ ಬೆಹ್ರೆನ್‌ಡಾರ್ಫ್‌, ತನ್ವೀರ್‌.

ಪಂದ್ಯ ಆರಂಭ: ಸಂಜೆ 7ಕ್ಕೆ, ನೇರ ಪ್ರಸಾರ: ಸ್ಪೋರ್ಟ್ಸ್‌ 18, ಜಿಯೋ ಸಿನಿಮಾ

ಪಂದ್ಯಕ್ಕೆ ಮಳೆ ಭೀತಿ

ಭಾನುವಾರದ 2ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ. ಶನಿವಾರ ಧಾರಾಕಾರ ಮಳೆ ಸುರಿದ ಕಾರಣ ಅಭ್ಯಾಸಕ್ಕೆ ತೊಂದರೆಯಾಗಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಭಾನುವಾರ ಮಳೆ ಸುರಿಯುವ ಸಾಧ್ಯತೆ ಶೇ.25ರಷ್ಟು ಇದ್ದು, ಪಂದ್ಯಕ್ಕೆ ಅಡ್ಡಿಯಾಗಬಹುದು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಮೈಸೂರಿನಲ್ಲಿ ಮಹಿಳೆಯರ ರಕ್ಷಣೆಗೆ ನಿಂತ ಚಾಮುಂಡಿ; ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ

January 6, 2024
ಜಿಲ್ಲೆ

ಶ್ರೀಕಾಂತ್ ಪೂಜಾರಿ ವಿರುದ್ಧದ ಕೇಸ್ ಲಿಸ್ಟ್​​ನಲ್ಲಿ ಟ್ವಿಸ್ಟ್; ಪೊಲೀಸ್ ಕಾರ್ಯವೈಖರಿ ಮೇಲೆ ಸಂಶಯ

January 4, 2024
ಜಿಲ್ಲೆ

ಡಿಸೆಂಬರ್ 10ರಿಂದ ಚೊಚ್ಚಲ ಖೇಲೋ ಪ್ಯಾರಾ ಗೇಮ್ಸ್‌; ಅನುರಾಗ್ ಠಾಕೂರ್ ಘೋಷಣೆ

November 23, 2023
ಕ್ರೈಂ ಸುದ್ದಿಗಳುಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಅಪರಿಚಿತರಿಂದ ವ್ಯಕ್ತಿ ಮೇಲೆ ಹಲ್ಲೆ..!

March 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?