ಜೆಡಿಎಸ್-ಬಿಜೆಪಿ ಮೈತ್ರಿ ನಾಯಕರಿಗೆ ಅತೃಪ್ತ ಶಾಸಕರ ಟೆನ್ಶನ್ ಶುರುವಾಗಿದ್ದು, ನಾಳಿನ ರಾಜ್ಯಸಭಾ ಚುನಾವಣೆಯಲ್ಲಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅಡ್ಡ ಮತದಾನ ಮಾಡುವ ಆತಂಕ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ಎದುರಾಗಿದ್ದು, ಈಗಾಗಲೇ ಬಿಜೆಪಿಯಿಂದ ಒಂದು ಹೆಜ್ಜೆ ಹಿಂದೆ ಇಟ್ಟಿರುವ ಈ ಇಬ್ಬರು ಅತೃಪ್ತ ಶಾಸಕರು, ನಾಳಿನ ಚುನಾವಣೆಯಲ್ಲಿ ಸ್ವಪಕ್ಷ ಶಾಸಕರಿಂದಲೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತದಾನ ಮಾಡುವ ಭಯ ದೋಸ್ತಿಗಳಿಗೆ ಎದುರಾಗಿದೆ. ಹೀಗಾಗಿ ಆ ಇಬ್ಬರು ಶಾಸಕರನ್ನು ನಾಳೆಯವರೆಗೂ ಹಿಡಿದಿಟ್ಟುಕೊಂಡು ಮೈತ್ರಿ ಅಭ್ಯರ್ಥಿಗಳ ಪರ ಮತ ಹಾಕಿಸಲು ದೋಸ್ತಿ ನಾಯಕರು ಕಾರ್ಯತಂತ್ರ ರೂಪಿಸಲಿದ್ದಾರೆ.
ಇನ್ನು ನಾಳೆ ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಿಗೆ ನಾಳೆ ವಿಪ್ ಜಾರಿ ಮಾಡುವ ಸಾಧ್ಯತೆ ಇದ್ದು, ಬಿಜೆಪಿಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಮೈತ್ರಿ ಅಭ್ಯರ್ಥಿಗಳ ಪರ ಕಡ್ಡಾಯ ಮತದಾನ ಮಾಡುವಂತೆ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ.