ಪ್ರತಿನಿಧಿ ವರದಿ ಚಾಮರಾಜನಗರ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ವಿಶೇಷ ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದೆ.
ಕೊಳ್ಳೇಗಾಲ ತಾಲೂಕಿನ ಸತ್ತೆಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರೇಕ್ಷಣೀಯ ಸ್ಥಳವಾದ ಭರಚುಕ್ಕಿ ಜಲಪಾತದ ಸೊಬಗನ್ನು ಬಹಳ ವಿಶಿಷ್ಟವಾಗಿ ಮತಗಟ್ಟೆಯಲ್ಲಿ ಸೃಷ್ಟಿಸಲಾಗಿದೆ. ಸಾಂಸ್ಕೃತಿಕ ಮತಗಟ್ಟೆ ಕಲ್ಪನೆಯಲ್ಲಿ ಬಹು ವಿಶಿಷ್ಟವಾಗಿ ರಚಿಸಲಾಗಿದ್ದು, ಮತದಾರರನ್ನು ಆಕರ್ಷಿಸುವಂತಿದೆ.
ಜಿಲ್ಲೆಯೂ ಶೇ. 48 ರಷ್ಟು ಅರಣ್ಯ ಸಂಪತ್ತನ್ನು ಹೊಂದಿದ್ದು, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಬುಡಕಟ್ಟು ಸಮುದಾಯವನ್ನು ಹೊಂದಿದೆ. ಅರಣ್ಯ ಮಹತ್ವ ಹಾಗೂ ಬುಡಕಟ್ಟು ಸಂಸ್ಕೃತಿ ತೋರಿಸುವ ಸಲುವಾಗಿ ಹಲವು ಮತಗಟ್ಟೆಗಳನ್ನು ಸುಂದರವಾಗಿ ಸಿದ್ಧಪಡಿಸಲಾಗಿದೆ. ಅರಣ್ಯ ವಾಸಿಗಳು ಬಳಸುವ ವಸ್ತುಗಳು, ಆಹಾರ ಪದ್ಧತಿ, ಆಚಾರ ವ್ಯವಸ್ಥೆ ಇತ್ಯಾದಿಗಳನ್ನು ಬಹಳ ಸುಂದರವಾಗಿ ಮತಗಟ್ಟೆಗಳಲ್ಲಿ ಚಿತ್ರಿಸಲಾಗಿದೆ.
25ಸಿಎಚ್ಎನ್.2:
ಚಿತ್ರವಿದೆ

