PrathinidhiPrathinidhi
  • ಮುಖಪುಟ
  • ನಮ್ಮ ಬಗ್ಗೆ
    • ನವಮಾಧ್ಯಮ ಪ್ರೈವೆಟ್‌ ಲಿ.
  • ನಮ್ಮ…
    • ಪ್ರಧಾನ ಸಂಪಾದಕರ ನುಡಿ
    • ಕಾರ್ಯನಿರ್ವಾಹಕ ಸಂಪಾದಕರ ನುಡಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Reading: ಹಾಸನಾಂಬ ದರ್ಶನದ ಟಿಕೆಟ್‌, ಲಾಡು ಮಾರಾಟದಿಂದಲೇ 6 ಕೋಟಿ ಸಂಗ್ರಹ: ಹುಂಡಿ ಎಣಿಕೆ ಈಗಷ್ಟೇ ಆರಂಭ
Share
Notification Show More
Aa
PrathinidhiPrathinidhi
Aa
  • ಮುಖಪುಟ
  • ನಮ್ಮ ಬಗ್ಗೆ
  • ನಮ್ಮ…
  • ಜಿಲ್ಲೆ
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Search
  • ಮುಖಪುಟ
  • ನಮ್ಮ ಬಗ್ಗೆ
    • ನವಮಾಧ್ಯಮ ಪ್ರೈವೆಟ್‌ ಲಿ.
  • ನಮ್ಮ…
    • ಪ್ರಧಾನ ಸಂಪಾದಕರ ನುಡಿ
    • ಕಾರ್ಯನಿರ್ವಾಹಕ ಸಂಪಾದಕರ ನುಡಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Follow US
Prathinidhi > ಸುದ್ದಿ > ಮುಖಪುಟ > ಹಾಸನಾಂಬ ದರ್ಶನದ ಟಿಕೆಟ್‌, ಲಾಡು ಮಾರಾಟದಿಂದಲೇ 6 ಕೋಟಿ ಸಂಗ್ರಹ: ಹುಂಡಿ ಎಣಿಕೆ ಈಗಷ್ಟೇ ಆರಂಭ
ಮುಖಪುಟಮುಖಪುಟಹಾಸನ

ಹಾಸನಾಂಬ ದರ್ಶನದ ಟಿಕೆಟ್‌, ಲಾಡು ಮಾರಾಟದಿಂದಲೇ 6 ಕೋಟಿ ಸಂಗ್ರಹ: ಹುಂಡಿ ಎಣಿಕೆ ಈಗಷ್ಟೇ ಆರಂಭ

Savitha prathindhi
Last updated: 2023/11/16 at 1:07 PM
Savitha prathindhi Published November 16, 2023
Share
SHARE

ರಾಜ್ಯದ ಪವಾಡ ಸದೃಶ ದೇವರು ಎಂದೇ ಹೇಳುವ ಹಾಸನದ ಹಾಸನಾಂಬ ದೇವರ 2023ರ ಜಾತ್ರಾ ಮಹೋತ್ಸವದಲ್ಲಿ ಕೇವಲ 12 ದಿನಗಳಲ್ಲಿ ಹಾಸನಾಂಬ ದೇವರ ದರ್ಶನದ ಟಿಕೆಟ್‌ ಹಾಗೂ ಲಾಡು ಮಾರಾಟದಿಂದ ಬರೀಬ್ಬರಿ 6.15 ಕೋಟಿ ರೂ. ಆದಾಯ ಬಂದಿದೆ. ಉಳಿದಂತೆ ಹುಂಡಿ ಎಣಿಕೆ ಕಾರ್ಯ ಈಗಷ್ಟೇ ಆರಂಭವಾಗಿದ್ದು, ಇಲ್ಲಿಯೂ ಕೋಟಿ ಕೋಟಿ ಹಣ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಜಿಲ್ಲಾಡಳಿವು ಮಾಹಿತಿ ನೀಡಿದೆ.

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ನಿನ್ನೆಯಷ್ಟೇ ವಿದ್ಯುಕ್ತ ತೆರೆ ಬಿದ್ದಿದೆ. ಇದರ ಬೆನ್ನಲ್ಲಿಯೇ ಹಾಸನಾಂಬೆ ದೇವಾಲಯ ಆವರಣದಲ್ಲಿ ಗುರುವಾರ ಬೆಳಗ್ಗೆ ಹುಂಡಿ‌ ಎಣಿಕೆ ಕಾರ್ಯ ಆರಂಭವಾಗಿದೆ. ಹುಂಡಿ‌ ಎಣಿಕೆ ಕಾರ್ಯದಲ್ಲಿ 150ಕ್ಕೂ ಅಧಿಕ ಜನರು ಭಾಗಿಯಾಗಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿ, ಬ್ಯಾಂಕ್ ಅಧಿಕಾರಿಗಳು, ಸ್ಕೌಟ್ ಅಂಡ್ ಗೈಡ್ ವಿದ್ಯಾರ್ಥಿಗಳು ಹಾಸನಾಂಬ ದೇವಾಲಯದ ಹುಂಡಿ ಎಣಿಕೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಹಾಸನಾಂಬೆ, ಸಿದ್ದೇಶ್ವರ ‌ದೇವಾಲಯದ ಆವರಣದಲ್ಲಿ ಹುಂಡಿಯಲ್ಲಿರುವ ಹಣ ಎಣಿಕೆ ಕಾರ್ಯ ನಡೆಯುತ್ತಿದೆ.

ಕಳೆದ 12 ದಿನಗಳ ಕಾಲ ನಡೆದ ಹಾಸನಾಂಬ ದೇವಿ ದರ್ಶನದಿಂದ ಸಂಗ್ರಹವಾಗಿದ್ದ ಹುಂಡಿ ಹಣವನ್ನು ಒಂದೊಂದೇ ಹುಂಡಿಗಳನ್ನು ಸುರಿದು ಎಣಿಕೆ ಕಾರ್ಯ ಮಾಡಲಾಗುತ್ತಿದೆ. ಇನ್ನು ಹುಂಡಿ ಎಣಿಕೆಗೂ ಮೊದಲೇ ಹಾಸನಾಂಬ ದೇವರ ದರ್ಶನ ಹಾಗೂ ಇತರೆ ವ್ಯವಸ್ಥೆಗಳಿಗೆ ಮಾಡಲಾಗಿದ್ದ ಟಿಕೆಟ್‌ಗಳ ಮಾರಾಟ ಮತ್ತು ಲಾಡು ಮಾರಾಟದಿಂದಲೇ ಹಾಸನಾಂಬ ದೇವಾಲಯಕ್ಕೆ ಬರೋಬ್ಬರು 6 ಕೋಟಿ 15ಲಕ್ಷ ರೂ. ಹಣ ಸಂಗ್ರಹವಾಗಿದೆ. ಇನ್ನು ಹುಂಡಿಯಿಂದಲೂ ಕೋಟ್ಯಾಂತರ ರೂ ಆದಾಯ ನಿರೀಕ್ಷೆ ಮಾಡಲಾಗಿದೆ. ಈ ಬಾರಿ ಹಾಸನಾಂಬೆ ಇತಿಹಾಸದಲ್ಲೇ ದಾಖಲೆಯ ಆದಾಯ ಸಂಗ್ರಹವಾಗುವ ಸಾಧ್ಯತೆಯಿದೆ ಎಂದು ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ ಬಾಗಿಲು ಮುಚ್ಚಿದ ಹಾಸನಾಂಬ ದೇಗುಲ: ಕಳೆದ 14 ದಿನಗಳಿಂದ (ನ.2ರಿಂದ ನ.15ರವರೆಗೆ) ಲಕ್ಷಾಂತರ ಭಕ್ತರಿಗೆ ದರ್ಶನ ನೀಡಿದ ಪವಾಡ ಸದೃಶ ಹಾಸನಾಂಬ ದೇವಿಯ ಗರ್ಭಗುಡಿಯನ್ನು ಬುಧವಾರ ಮಧ್ಯಾಹ್ನ 12.23ಕ್ಕೆ ಗಣ್ಯರ ಸಮ್ಮುಖದಲ್ಲಿ ಮುಚ್ಚಲಾಯಿತು. ಈ ಮೂಲಕ 2023ರ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.

- ಜಾಹೀರಾತು -

ರಾಜ್ಯದಲ್ಲಿ ಒಮ್ಮೆ ಹಚ್ಚಿದ ದೀಪ ಒಂದು ವರ್ಷದವರೆಗೆ ಪ್ರಜ್ವಲಿಸುತ್ತಾ ಉರಿಯುವಂತಹ ಪವಾಡಕ್ಕೆ ಪ್ರಸಿದ್ಧಿಯಾಗಿರುವ ಹಾಸನ ನಗರದ ಹಾಸನಾಂಬೆ ದೇವಸ್ಥಾನ ವರ್ಷಕ್ಕೆ ಕೇವಲ 15 ದಿನ ಮಾತ್ರ ಭಕ್ತರ ದರ್ಶನಕ್ಕೆ ಮುಕ್ತವಾಗಿರುತ್ತದೆ. ಇದೇ ವೇಳೆ ಹಾಸನಾಂಬ ಜಾತ್ರಾ ಮಹೋತ್ಸವವನ್ನೂ ನಡೆಸಲಾಗುತ್ತದೆ. ಇನ್ನು 2023ರ ಹಾಸನಾಂಬ ದೇವಿಯ ದರ್ಶನವು ನವೆಂಬರ್‌ 2ರಿಂದ ಆರಂಭವಾಗಿ ನವೆಂಬರ್ 15ರ ಮಧ್ಯಾಹ್ನ 12.23ಕ್ಕೆ ಮುಕ್ತಾಯವಾಗಿದೆ. ಇಂದು ಮಧ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹಾಗೂ  ಜಿಲ್ಲಾಧಿಕಾರಿ ಸತ್ಯಭಾಮಾ ನೇತೃತ್ವದಲ್ಲಿ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲನ್ನು ಮುಚ್ಚಲಾಯಿತು.

Savitha prathindhi November 16, 2023 November 16, 2023
Share this Article
Facebook Twitter Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a comment

Leave a Reply Cancel reply

Your email address will not be published. Required fields are marked *

--:--
--:--
  • Prathinidhi

Poll

[totalpoll id=”12842″]

Prathinidhi Facebook

You Might Also Like

ಜಿಲ್ಲೆಮುಖಪುಟಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಚಾಮುಂಡಿ ಬೆಟ್ಟದ ಏಕಾಶಿಲಾ ನಂದಿ ವಿಗ್ರಹಕ್ಕೆ ಮಹಾಭಿಷೇಕ

December 3, 2023
ಮುಖಪುಟಮುಖಪುಟ

ಕಾಂಗ್ರೆಸ್ ಎಲ್ಲೆಲ್ಲಿ ಗೆದ್ದಿದೆ

December 3, 2023
ಅಂಕಣಮುಖಪುಟಮುಖಪುಟಸಹಕಾರ ನೋಟ

ಪಾಕಿಸ್ತಾನದ ಬೌದ್ಧ ಮಂದಿರದಲ್ಲಿ ಸಿಕ್ಕಿದ ಪೂರ್ವಜರ ಹಳೇ ನಿಧಿ

December 3, 2023
ಜಿಲ್ಲೆಮುಖಪುಟಮುಖಪುಟ

ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಆರಂಭಿಸುತ್ತೇವೆ: ಡಿಕೆಶಿ

December 3, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
Facebook Twitter Youtube Whatsapp
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • Ethics Corrections Policy
  • Fact checking policy
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • Ethics Corrections Policy
  • Fact checking policy

© 2022 Navamadhyama Private Limited. All Rights Reserved. Designed by Codeflurry Technologies

Welcome Back!

Sign in to your account

Lost your password?