PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ಅಳಿಸುವೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ಅಳಿಸುವೆ
ಚಾಮರಾಜನಗರ

ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ಅಳಿಸುವೆ

ಪ್ರತಿನಿಧಿ
Last updated: April 13, 2024 6:36 pm
ಪ್ರತಿನಿಧಿ
Published April 13, 2024
Share
SHARE

ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ಅಳಿಸುವೆ

*ಪತ್ರಕರ್ತರೊಡನೆ ಸಂವಾದದಲ್ಲಿ ಸುನೀಲ್‍ಬೋಸ್ ಭರವಸೆ

ಪ್ರತಿನಿಧಿ ವರದಿ ಚಾಮರಾಜನಗರ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದಿಂದ ನಾನು ಸಂಸದನಾಗಿ ಆಯ್ಕೆಯಾದರೆ ಎಲ್ಲ ಶಾಸಕರ ಜತೆಗೂಡಿ ಹಿಂದುಳಿದ ಕ್ಷೇತ್ರ ಎಂಬ ಹಣೆಪಟ್ಟಿ ಅಳಿಸುವ ಕೆಲಸ ಮಾಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್‍ಬೋಸ್ ಭರವಸೆ ನೀಡಿದರು.

- ಜಾಹೀರಾತು -

ಬೆಂಗಳೂರು-ಕನಕಪುರ-ಚಾಮರಾಜನಗರ ರೈಲು ಯೋಜನೆ ಆರಂಭಿಸಬೇಕಿದೆ. ಉದ್ಯೋಗ ಸೃಷ್ಟಿಸಲು ಕ್ಷೇತ್ರ ವ್ಯಾಪ್ತಿಯಲ್ಲಿ ಗಾರ್ಮೆಂಟ್ಸ್ ಮತ್ತು ವಿವಿಧ ಕಾರ್ಖಾನೆಗಳ ಪ್ರಾರಂಭಕ್ಕೆ ಆದ್ಯತೆ ನೀಡುತ್ತೇವೆ. ಕ್ಷೇತ್ರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ. ಕ್ಷೇತ್ರದ ಅಭಿವೃದ್ಧಿಗೆ ನನ್ನದೆ ಆದ ಕಾರ್ಯಕ್ರಮಗಳಿವೆ ಎಂದು ಪತ್ರಕರ್ತರೊಡನೆ ನಡೆದ ಸಂವಾದದಲ್ಲಿ ತಿಳಿಸಿದರು.

ನನ್ನ ಗೆಲುವಿಗೆ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳು ಬಲ ತುಂಬಲಿವೆ. ಅಲ್ಲದೆ ಕಳೆದ 10 ವರ್ಷಗಳ ಕಾಲ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಹೇಳಿರುವ ಸುಳ್ಳುಗಳಿಂದ ಜನರು ಬೇರಸಗೊಂಡಿದ್ದಾರೆ. ಈ ಬಾರಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 18 ವರ್ಷದಿಂದ ನಾನು ತಿ.ನರಸೀಪುರ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ನಾನು ಕ್ಷೇತ್ರದ ಜನರಿಗೆ ಸಿಗದಿದ್ದರೆ ಹಾಗೂ ಒಡನಾಟ ಹೊಂದಿಲ್ಲದಿದ್ದರೆ ನನ್ನ ತಂದೆ ಎಚ್.ಸಿ.ಮಹದೇವಪ್ಪ ಅವರು 4 ಬಾರಿ ಗೆಲ್ಲುತ್ತಿದ್ದರೇ ಹಾಗೂ ಪ್ರಮುಖ ಖಾತೆಗಳ ಸಚಿವರಾಗುತ್ತಿದ್ದರೆ. ನಮ್ಮ ರಾಜಕೀಯ ವಿರೋಧಿಗಳು ಹೀಗೆಲ್ಲ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಕ್ಷೇತ್ರದ ಎಲ್ಲ ಕಡೆಯಲ್ಲೂ ಅಭಿವೃದ್ದಿ ಕೆಲಸ ಮಾಡುತ್ತೇನೆ. ಮೈಸೂರು ಜಿಲ್ಲೆಗೆ ಮಾತ್ರ ಸೀಮಿತವಾಗುವುದಿಲ್ಲ. ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ಅವರು ಯಾವ ರೀತಿ ಅಭಿವೃದ್ದಿ ಕೆಲಸ ಮಾಡಬೇಕೆಂದು ತೋರಿಸಿಕೊಟ್ಟು ಹೋಗಿದ್ದಾರೆ. ಅವರನ್ನು ಹಾದಿಯಲ್ಲಿ ನಡೆಯುತ್ತೇನೆ ಎಂದು ಹೇಳಿದರು.

ಕ್ಷೇತ್ರದ ಎಲ್ಲ ಕಡೆಯಲ್ಲೂ ಕಾಂಗ್ರೆಸ್‍ಗೆ ಉತ್ತಮ ವಾತಾವರಣವಿದೆ. 1991ರಲ್ಲಿ ನನ್ನ ತಂದೆ ಎಚ್.ಸಿ.ಮಹದೇವಪ್ಪ ಅವರು ಇದೇ ಕ್ಷೇತ್ರಕ್ಕೆ ಸ್ಪರ್ಧಿಸಿದ್ದರು. ಅವರು ಸಚಿವರಾಗಿ ಜಿಲ್ಲೆಯ ಅಭಿವೃದ್ದಿಗೆ ಕೆಲಸಗಳನ್ನು ಮಾಡಿ ಎಲ್ಲ ಕಡೆ ಪರಿಚಿತರಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ನಾನು ಜನರಿಗೆ ಪರಿಚಯವಿದ್ದೇನೆ. ಜಿಲ್ಲೆಯಲ್ಲಿಯೂ ನಾನು ಈಗ ಓಡಾಡಿ ಜನರಿಗೆ ಹತ್ತಿರವಾಗುತ್ತಿದ್ದೇನೆ ಎಂದರು.

ಹಾಲಿ ಸಂಸದರಾದ ವಿ.ಶ್ರೀನಿವಾಸಪ್ರಸಾದ್ ಅವರು ನನಗೆ ಆಶೀರ್ವಾದ ಮಾಡಿದ್ದು, ನನಗೆ ಶಕ್ತಿ ಬಂದಿದೆ. ಅವರ ಬೆಂಬಲಿಗರು ಸಹ ಕಾಂಗ್ರೆಸ್ ಸೇರಿದ್ದಾರೆ. ಈ ಬೆಳವಣಿಗೆಯು ಪ್ರಸಾದ್ ಅವರಿಂದ ನಮಗೆ ಬೆಂಬಲವಿದೆ ಎಂಬುದನ್ನು ಸೂಚಿಸುತ್ತದೆ ಎಂದು ಸುನೀಲ್ ಹೇಳಿದರು.

ಆರ್.ಧ್ರುವನಾರಾಯಣ ಅವರ ಹೆಸರೇಳಲು ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರಿಗೆ ನೈತಿಕತೆಯಿಲ್ಲ. ಧ್ರುವ ಅವರು ನಿಧನರಾದಾಗ ಅವರ ಮಗ ದರ್ಶನ್ ಪರ ನಂಜನಗೂಡು ಕ್ಷೇತ್ರದಲ್ಲಿ ಕೆಲಸ ಮಾಡದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ನಮ್ಮ ತಂದೆ ಹೆಸರನ್ನು ಬಳಸಕೂಡದು ಎಂದು ದರ್ಶನ್ ಕೂಡ ತಾಕೀತು ಮಾಡಿದ್ದಾರೆ ಎಂದರು.

ಬಿಜೆಪಿ ಮುಖಂಡರು ತಮ್ಮ ಸಾಧನೆಗಳನ್ನು ಹೇಳಿಕೊಂಡು ಮತ ಕೇಳಬೇಕು. ಜನರ ಎದುರು ಹೇಳಿಕೊಳ್ಳುವ ಅಂತಹ ಯಾವುದೇ ಸಾಧನೆಗಳನ್ನು ಅವರು ಮಾಡಿಲ್ಲ. ಆದ್ದರಿಂದ ಅವರು ಹತಾಶರಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಸಂವಾದದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ, ಪ್ರಧಾನ ಕಾರ್ಯದರ್ಶಿ ಪ್ರಸಾದ್‍ಲಕ್ಕೂರು, ಪತ್ರಕರ್ತರು ಇದ್ದರು.

13ಸಿಎಚ್ಎನ್.1:
ಚಿತ್ರ ವಿದೆ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಮೇ.13 ರಂದು ದೊಡ್ಡಿಂದುವಾಡಿ ವೃತ್ತದಲ್ಲಿ ರಸ್ತೆ ತಡೆ ಚಳುವಳಿ

May 11, 2024
ಚಾಮರಾಜನಗರ

ಶಿಥಿಲಗೊಂಡ ಅಂಗನವಾಡಿ ಕೇಂದ್ರಗಳು

March 21, 2024
ಚಾಮರಾಜನಗರ

ಸ್ಥಳದಲ್ಲೇ ಬ್ರಹ್ಮರಥದ ಚಿತ್ರ ಬರೆದು ಸಂಭ್ರಮಿಸಿದ ಪುಟಾಣಿಗಳು

July 7, 2024
ಚಾಮರಾಜನಗರ

ಕೌಟುಂಬಿಕ ಕಲಹ: ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ

November 28, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?