PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲೋಕಸಭಾ ಚುನಾವಣೆ ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ವರಿಷ್ಠರ ಕೈಗೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ರಾಜಕೀಯ > ಲೋಕಸಭಾ ಚುನಾವಣೆ ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ವರಿಷ್ಠರ ಕೈಗೆ
ರಾಜಕೀಯಸಮಗ್ರ

ಲೋಕಸಭಾ ಚುನಾವಣೆ ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ವರಿಷ್ಠರ ಕೈಗೆ

Prathinidhi News
Last updated: December 16, 2023 10:35 am
Prathinidhi News
Published December 16, 2023
Share
SHARE

ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಮೊದಲ ಹಂತ ತಡವಾಗಿಯಾದರೂ ಚಾಲನೆ ದೊರೆತಿದೆ. ಈ ಕ್ಷೇತ್ರದ ವೀಕ್ಷಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಶುಕ್ರವಾರ ಸಂಜೆ ಇಲ್ಲಿಯ ಮಯೂರ ರೆಸಾರ್ಟ್‌ನಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಡಿ. 30ರೊಳಗೆ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯು ವರಿಷ್ಠರ ಕೈಗೆ ತಲುಪುವ ಸಾಧ್ಯತೆ ಇದೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌, ಶಾಸಕ ಪ್ರಸಾದ ಅಬ್ಬಯ್ಯ, ವಿಪ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವ ಹಿಂಡಸಗೇರಿ, ಮಾಜಿ ಸಂಸದ ಐ.ಜಿ. ಸನದಿ, ಮುಖಂಡರಾದ ಎಫ್‌.ಎಚ್‌. ಜಕ್ಕಪ್ಪನವರ ಹಲವು ಮುಖಂಡರ ನೇತೃತ್ವದಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಸಭೆ ನಡೆಯಿತು.

ಜಿಲ್ಲೆಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಧಾರವಾಡ ಗ್ರಾಮೀಣ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ತಮ್ಮ ಪರವಾದ ಅಭ್ಯರ್ಥಿಗಳ ಹೆಸರನ್ನು ಉಸ್ತುವಾರಿ ಹೊತ್ತಿರುವ ಸಚಿವೆ ಹೆಬ್ಬಾಳಕರಗೆ ಶಿಫಾರಸು ಮಾಡಿದರು.
ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶೀವಲೀಲಾ ಅವರೂ ಆಕಾಂಕ್ಷಿಗಳು. ಆದರೆ, ಅನಾರೋಗ್ಯ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು. ಇನ್ನು, ರಜತ ಉಳ್ಳಾಗಡ್ಡಿಮಠ, ಬಸವರಾಜ ಗುರಿಕಾರ, ಅನಿಲಕುಮಾರ ಪಾಟೀಲ, ಡಾ. ಮಯೂರ ಮೋರೆ, ಶರಣಪ್ಪ ಕೊಟಗಿ, ಶಾಕೀರ ಶನದಿ ಸೇರಿದಂತೆ ಇತರೆ ಆಕಾಂಕ್ಷಿಗಳು ಇದ್ದರು.

ಸಮಾಲೋಚನಾ ಸಭೆ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಈಗಾಗಲೇ ಈ ಸಮಾಲೋಚನಾ ಸಭೆ ನಡೆಯಬೇಕಿತ್ತು. ಗೃಹ ಲಕ್ಷ್ಮೀ ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಮಾಡಲಾಗಿಲ್ಲ. ಉಡುಪಿಯ ಉಸ್ತುವಾರಿಯೂ ಹೌದು. ಬೆಳಗಾವಿಗೆ ಹೋಗಲು ವಾರಕ್ಕೆ ಎರಡು ದಿನ ಮಾತ್ರ ಸಮಯವಿತ್ತು. ಹೀಗಾಗಿ ಧಾರವಾಡಕ್ಕೆ ಬರಲು ತಡವಾಗಿದೆ. ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ. ಈ ಸಂಬಂಧ ನನಗೆ ಸೂಚನೆ ಕೊಟ್ಟಿದ್ದಾರೆ. ಈ ಭಾಗದ ಶಾಸಕರು, ಸಚಿವರೊಂದಿಗೆ ಮಾತನಾಡಿಕೊಳ್ಳಬೇಕಿದೆ.

- ಜಾಹೀರಾತು -

ಆಕಾಂಕ್ಷಿಗಳೆಲ್ಲ ಖುದ್ದಾಗಿ ಭೇಟಿಯಾಗಿ ಅರ್ಜಿ ಕೊಡಬೇಕು. ಅಲ್ಪಸಂಖ್ಯಾತರದ್ದು ಇಡೀ ರಾಜ್ಯದಲ್ಲಿ 3 ಕ್ಷೇತ್ರದ ಬೇಡಿಕೆ ಇದೆ. ಎಲ್ಲವನ್ನೂ ಪಕ್ಷದ ಅಧ್ಯಕ್ಷರಿಗೆ ವರದಿ ಮಾಡುತ್ತೇನೆ. ಧಾರವಾಡದಿಂದ ಅಲ್ಪಸಂಖ್ಯಾತರು ಯಾರು ಅರ್ಜಿ ಸಲ್ಲಿಸಿಲ್ಲ. ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಕುರಿತು ಕೂಲಂಕಷವಾಗಿ ಪರಿಶೀಲಿಸಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವ ಶಕ್ತಿಯುಳ್ಳ ಅಭ್ಯರ್ಥಿಯ ಹೆಸರನ್ನು ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆಗಾಗಿ ಕ್ಯಾಬಿನೆಟ್‌ ಸಚಿವರನ್ನು ಉಸ್ತುವಾರಿ ನೇಮಿಸಿದ್ದು, ಈಗಾಗಲೇ ಬಹುತೇಕ ಕ್ಷೇತ್ರಗಳಲ್ಲಿ ಪ್ರಾಥಮಿಕ ಹಂತದ ಸಮಾಲೋಚನಾ ಸಭೆ ನಡೆದಿದ್ದು, ಧಾರವಾಡ ಕ್ಷೇತ್ರ ಮಾತ್ರ ಬಾಕಿ ಉಳಿದಿತ್ತು. ಕಳೆದ ನವೆಂಬರ್‌ ತಿಂಗಳಲ್ಲಿಯೇ ಆಗಬೇಕಿದ್ದ ಸಭೆ ಶುಕ್ರವಾರ ನಡೆದಿದ್ದು ಮೊದಲ ಹಂತದಲ್ಲಿ ಸಚಿವೆ ಹೆಬ್ಬಾಳಕರ, ಮುಖಂಡರ, ಆಕಾಂಕ್ಷಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಆಕಾಂಕ್ಷಿಗಳ ಪಟ್ಟಿಯನ್ನು ವರಿಷ್ಠರಿಗೆ ನೀಡುವ ಮೂಲಕ ಮೊದಲ ಹಂತದ ಪ್ರಕ್ರಿಯೆ ಮುಗಿಸಲಿದ್ದಾರೆ. ವರಿಷ್ಠರು ತಮ್ಮ ಹಂತದಲ್ಲಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಬೆಂಗಳೂರುಮುಖಪುಟರಾಜಕೀಯ

PODCAST : ಡಾ. ಸುಧಾಕರ್ಗೆ ವಿರುದ್ಧ ಪ್ರದೀಪ್ ಈಶ್ವರ್ ಕೆಂಡಾಮಂಡಲ

March 25, 2024
ಚುನಾವಣೆಜಿಲ್ಲೆಮುಖಪುಟಮೈಸೂರು ನಗರರಾಜಕೀಯ

PODCAST : ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ…!

April 3, 2024
ಸಮಗ್ರ

ಎರಡು ತಿಂಗಳೊಳಗಾಗಿ ಕಾಮಗಾರಿ ಪೂರ್ಣ

May 10, 2024
ಮುಖಪುಟಮೈಸೂರು ನಗರರಾಜಕೀಯಸನ್ನಿಧಾನ

ಸಿಎಂ ಆಗಲು ಮತ್ತೊಬ್ಬರಿಗೆ ಅವಕಾಶ ಇದೆಯೋ ಇಲ್ಲವೋ ಎಂಬುದು ಹೈಕಮಾಂಡ್ ತೀರ್ಮಾನಿಸುತ್ತದೆ : ಗೃಹಸಚಿವ ಜಿ ಪರಮೇಶ್ವರ್‌

July 11, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?