PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪುರಸಭೆಯ ನಷ್ಟ ಮುಖ್ಯಾಧಿಕಾರಿಯೇ ಭರಿಸಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಪುರಸಭೆಯ ನಷ್ಟ ಮುಖ್ಯಾಧಿಕಾರಿಯೇ ಭರಿಸಲಿ
ಮೈಸೂರು ಗ್ರಾಮಾಂತರ

ಪುರಸಭೆಯ ನಷ್ಟ ಮುಖ್ಯಾಧಿಕಾರಿಯೇ ಭರಿಸಲಿ

ಪ್ರತಿನಿಧಿ
Last updated: April 12, 2024 6:37 pm
ಪ್ರತಿನಿಧಿ
Published April 12, 2024
Share
SHARE
  • ಕೆ.ಆರ್. ನಗರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಆಗ್ರಹ

ಪ್ರತಿನಿಧಿ ವರದಿ ಕೆ.ಆರ್.ನಗರ

ಪುರಸಭೆಯ 72 ವಾಣಿಜ್ಯ ಮಳಿಗೆಗಳಿಂದ ಲಕ್ಷಾಂತರ ರೂಪಾಯಿಗಳ ಬಾಡಿಗೆ ನಷ್ಟವುಂಟಾಗಿದ್ದು ಇದಕ್ಕೆ ಪುರಸಭೆಯ ಆಡಳಿತ ಮಂಡಳಿ ಹಾಗೂ ಮುಖ್ಯಾಧಿಕಾರಿ ಡಾ.ಜಯಣ್ಣ ಅವರೇ ನೇರ ಹೊಣೆ ಎಂದು ನಗರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಆರೋಪಿಸಿದರು.

ಆನ್‌ಲೈನ್ ಮೂಲಕ ಟೆಂಡರ್ ಆಗಿ ಒಂದು ತಿಂಗಳು ಕಳೆದರೂ ಬಿಡ್ ದಾರರಿಗೆ ಮಳಿಗೆಗಳನ್ನು ಹಸ್ತಾಂತರ ಮಾಡದೇ ಇರುವುದರಿಂದ ಪುರಸಭೆಗೆ 24 ಲಕ್ಷ ರೂಪಾಯಿ ನಷ್ಟವುಂಟಾಗಿದ್ದು,  ಈ ನಷ್ಟವನ್ನು ಮುಖ್ಯಾಧಿಕಾರಿಯೇ ಭರಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಗುರುವಾರ ಪಟ್ಟಣದ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಎಚ್ಚರಿಸಿದರು.

ಹಳೆಯ ಹರಾಜಿನ ಮಳಿಗೆಗಳಿಂದ ತಿಂಗಳಿಗೆ 3 ರಿಂದ 4 ಲಕ್ಷ ರೂಪಾಯಿ ಮಾತ್ರ ಆದಾಯ ಬರುತ್ತಿತ್ತು. ಆದರೆ ಈಗಿನ ಹರಾಜಿನಿಂದ ಉತ್ತಮ ಲಾಭ ಬರುವುದಿದ್ದರೂ ಹಳೆಯ ಮಳಿಗೆಯವರ ಮೇಲೆ ಯಾಕೆ ಅತಿಯಾದ ಪ್ರೀತಿ ತೋರಿಸುತ್ತಿದ್ದಾರೆ ಎಂದು ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ ಎಂದರು.

- ಜಾಹೀರಾತು -

ಶಾಸಕ ಡಿ.ರವಿಶಂಕರ್ ಅವರು ಈ ಪುರಸಭಾ ಮಳಿಗೆಗಳ ವಿಚಾರವಾಗಿ ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ,  ನಾನು ಹಣ ಪಡೆದಿಲ್ಲ ಅಂತ ಹೇಳಿದ್ದಾರೆಯೇ ಹೊರತು, ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನವನ್ನು ಮಾಡಿಲ್ಲ. ಅಲ್ಲದೆ, ಮಾಜಿ ಸಚಿವ ಸಾ.ರಾ.ಮಹೇಶ್ ಅವರು 20 ವರ್ಷಗಳಲ್ಲಿ ಸಾರ್ವಜನಿಕರಿಗೆ 400 ಕೋಟಿ ರೂ. ಖರ್ಚು ಮಾಡಿದ್ದೇನೆ ಎಂದು ಹೇಳಿರುವ ಬಗ್ಗೆ ರವಿಶಂಕರ್ ಅವರು ಈ ಬಗ್ಗೆ ಜನರಿಗೆ ಲೆಕ್ಕ ಕೊಡಿ ಅಂತ ಕೇಳಿದ್ದಾರೆ. ಇದು ಸರಿಯೇ ಎಂದು ಪ್ರಶ್ನಿಸಿದರು.

ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಧರ್ಮ, ಪುರಸಭಾ ಮಾಜಿ ಸದಸ್ಯರಾದ ರಂಗಸ್ವಾಮಿ, ಜಿ.ಪಿ.ಮಂಜು, ಬಂಗಾರಿ ತಮ್ಮೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

12 ಕೆಆರ್‌ಎನ್-2:- ಕೆ.ಆರ್.ನಗರದ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ನಗರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಮಾತನಾಡಿದರು. ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷೆ ದ್ರಾಕ್ಷಾಯಿಣಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಧರ್ಮ, ಪುರಸಭಾ ಮಾಜಿ ಸದಸ್ಯರಾದ ರಂಗಸ್ವಾಮಿ, ಜಿ.ಪಿ.ಮಂಜು ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೀಡೆಮುಖಪುಟಮೈಸೂರು ಗ್ರಾಮಾಂತರ

ಖೋ ಖೋ ಚಾಂಪಿಯನ್‌ ಚೈತ್ರ ಗೆ ಸ್ವಾಗತ ಕೋರಲು ಹುಟೂರಿನಲ್ಲಿ ʼಚೈತ್ರೋತ್ಸವʼ ದ ಸಿದ್ಧತೆ

January 20, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ರೈತರನ್ನು ಬಲಿ ಪಡೆದಿದ್ದ ಮತ್ತೊಂದು ಹುಲಿ ಸೆರೆ! ಗ್ರಾಮಸ್ಥರ ನಿಟ್ಟುಸಿರು

November 10, 2025
ಮೈಸೂರು ಗ್ರಾಮಾಂತರ

ಮನಗಳ ಹಕ್ಕುಪತ್ರ ನೀಡಲು ಆಗ್ರಹ

March 22, 2024
ಮೈಸೂರು ಗ್ರಾಮಾಂತರ

ಯುವಕನ ಸಾವಿಗೆ ನ್ಯಾಯ ದೊರಕಿಸಿ

March 19, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?