PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕೆ.ಎಚ್.ಮುನಿಯಪ್ಪ ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಬೇಕು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಕೆ.ಎಚ್.ಮುನಿಯಪ್ಪ ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಬೇಕು
ಸಮಗ್ರ

ಕೆ.ಎಚ್.ಮುನಿಯಪ್ಪ ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಬೇಕು

ಪ್ರತಿನಿಧಿ
Last updated: March 28, 2024 7:36 pm
ಪ್ರತಿನಿಧಿ
Published March 28, 2024
Share
SHARE

ಮಾದಿಗ ಸಮುದಾಯ ಆಗ್ರಹ

ಪ್ರತಿನಿಧಿ ವರದಿ ಚಿಕ್ಕಬಳ್ಳಾಪುರ

ಮಾದಿಗ ಸಮುದಾಯ ರಾಷ್ಟ್ರೀಯ ನಾಯಕರಾಗಿರುವ ಕೆ.ಎಚ್.ಮುನಿಯಪ್ಪ ಅವರು ಸೂಚಿಸಿದವರನ್ನು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆಮಾಡಬೇಕು, ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ
ಇದರ ಪರಿಣಾಮ ಎದುರಿಸಬೇಕಾಗುವುದು ಎಂದು ಸಮುದಾಯದ ಮುಖಂಡರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಎಚ್ಚರಿಸಿದರು.

ಕಾಂಗ್ರೆಸ್‌ನ ಯುವ ಮುಖಂಡ ಪಟ್ರೇನಹಳ್ಳಿ ಕೃಷ್ಣ ಮಾತನಾಡಿ, ಪರಿಶಿಷ್ಟರಲ್ಲಿ ಎಡಗೈ, ಬಲಗೈಯೆಂಬ ಬೇಧವಿಲ್ಲ. ಆದರೆ ಇತ್ತೀಚಿಗೆ ಕೆಲ ಕಾಂಗ್ರೆಸ್ಸಿಗರು ತಮ್ಮ ಹಿತಾಸಕ್ತಿಗಾಗಿ ಎಡ, ಬಲ ಎಂಬ ತಾರತಮ್ಯ ಸೃಷ್ಟಿಸಿ ಒಡೆದು ಆಳುವ ನೀತಿ ಮಾಡುತ್ತಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ಕಾರಣಕ್ಕೂ ಅಂತಹವರಿಗೆ ಮಣೆ ಹಾಕಬಾರದು ಎಂದು ನುಡಿದರು.

- ಜಾಹೀರಾತು -

ಕೋಲಾರ ಕ್ಷೇತ್ರದಲ್ಲಿ ೭ ಬಾರಿ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿರುವ ಕೆ.ಎಚ್.ಮುನಿಯಪ್ಪ ಅವರು, ಕೆಲವರ ಪಿತೂರಿಯಿಂದಾಗಿ ಸೋಲಬೇಕಾಯಿತು. ನಂತರ ಪಕ್ಷದ ವರಷ್ಠರು ತಿಳಿಸಿದಂತೆ ರಾಜ್ಯ ರಾಜಕಾರಣಕ್ಕೆ ಬಂದ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್‌ನ ಮತಗಳಿಕೆಯ ಪ್ರಮಾಣವೂ ಹೆಚ್ಚಾಗಿದೆ ಎಂದರು.

ಕೋಲಾರ ಕ್ಷೇತ್ರದ ಪ್ರತಿಯೊಂದು ಬೂತ್‌ನ ಅರಿವು ಹೊಂದಿರುವ ಕೆ.ಎಚ್.ಮುನಿಯಪ್ಪ ಅವರು ಸೂಚಿಸುವವರಿಗೆ ಕ್ಷೇತ್ರದ ಟಿಕೆಟ್ ನೀಡಿದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲುವು ಸಾಧಿಸಲಿದೆ. ಈ ನಿಟ್ಟಿನಲ್ಲಿ ಕೆ.ಎಚ್.ಮುನಿಯಪ್ಪ ಅವರು ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಿ ಸಾಮಾಜಿಕನ್ಯಾಯ ಒದಗಿಸಬೇಕು. ಅಲ್ಲದೇ ರಾಜೀನಾಮೆ ನೀಡುವ ಬೆದರಿಕೆ ಒಡ್ಡುವ ನಾಯಕರು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ ಎಂದರು.

ಮುಖಂಡ ದಿನ್ನೆಹೊಸಹಳ್ಳಿ ಎಂ.ಪೆದ್ದಣ್ಣ ಮಾತನಾಡಿ, ಪರಿಶಿಷ್ಟರ ಒಗ್ಗಟ್ಟು ಒಡೆಯುವ ಉದ್ದೇಶದಿಂದಲೇ ಕೆಲ ರಾಜಕಾರಣಿಗಳು ಟಿಕೆಟ್ ಘೋಷಣೆ ಮಾಡುವ ಸಂದರ್ಭದಲ್ಲಿ ಎಡ ಬಲ ಎಂಬ ಬೇಧ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆಯಿಲ್ಲದ ಕೆ.ಎಚ್.ಮುನಿಯಪ್ಪ ಅವರು ಸೂಚಿಸುವವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಹಿರಿಯ ನಾಯಕ ಮುನಿಕೃಷ್ಣಪ್ಪ ಮಾತನಾಡಿ, ರಾಜ್ಯದ ಮೀಸಲುಕ್ಷೇತ್ರದಲ್ಲಿ ಇಲ್ಲದ ಕಗ್ಗಂಟು ಕೋಲಾರ ಕ್ಷೇತ್ರದಲ್ಲಿ ಮಾತ್ರ ಹುಟ್ಟುಹಾಕುತ್ತಿದ್ದು, ನೊಂದಸಮುದಾಯಕ್ಕೆ ಟಿಕೆಟ್ ನೀಡಬೇಕು. ಈಗಾಗಲೇ ಕಾಂಗ್ರೆಸ್‌ನಲ್ಲಿ ಮಗ, ಸಂಬಂಧಿಕರಿಗೆ ಟಿಕೆಟ್ ನೀಡಿರುವಾಗ ಕೋಲಾರದಲ್ಲಿ ಮಾತ್ರ ತಾರತಮ್ಯ ಮಾಡುವುದು ಸರಿಯಲ್ಲ. ಕೆ.ಎಚ್ ಬಣಕ್ಕೆ ಟಿಕೆಟ್ ನೀಡಬೇಕು. ಟಿಕೆಟ್ ವಂಚನೆ ಮಾಡಿದರೆ ಸಮುದಾಯವು ಸಿಡಿದೇಳುವುದೆಂದು ಎಚ್ಚರಿಸಿದರು.

ಸಿ.ಎನ್.ಮುರಳಿ, ಮಂಜುನಾಥ್, ಎಚ್.ಮಹದೇವಪ್ಪ, ರಮಣ್ ಅಕೇಶ್, ವೆಂಕಟಲಕ್ಷ್ಮಮ್ಮ, ಮಂಚನಬಲೆ ಪ್ರಕಾಶ್, ಡ್ಯಾನ್ಸ್ ಶ್ರೀನಿವಾಸ್, ಪ್ರಕಾಶ್, ಶ್ರೀಧರ್, ನಂದೀಶ್, ವಡ್ರೇಪಾಳ್ಯ ಮೂರ್ತಿ, ತಿಪ್ಪೇನಹಳ್ಳಿ ಮುನಿರಾಜು, ಪ್ರಭಾಕರ್, ಶ್ರೀಕಾಂತ್, ನಾಗೇಶ್, ಗಜೇಂದ್ರ, ವಿ.ಸುರೇಶ್, ಎಸ್.ಮುರಳಿ ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ನಿಖಿಲ್ ದಬ್ಬಾಳಿಕೆಯ ಹೈಡ್ರಾಮಾ ಖಂಡನೀಯ

July 12, 2024
ಸಮಗ್ರ

ಕೃಷಿಯಲ್ಲಾದ ನಷ್ಟದಿಂದ ಕೃಷಿಕ ಆತ್ಮಹತ್ಯೆ

May 8, 2024
ಜಿಲ್ಲೆಮೈಸೂರು ನಗರಸಮಗ್ರ

ಇನ್ಫೋಸಿಸ್ ಸಂಸ್ಥಾಪಕ ಎನ್ .ಆರ್ ನಾರಾಯಣಮೂರ್ತಿ ಹೇಳಿಕೆಗೆ ಸಚಿವರ ವಾಗ್ದಾಳಿ

December 3, 2023
ಸಮಗ್ರ

ಸರ್ಕಾರದ ಒತ್ತಡಕ್ಕೆ ಮಣಿಯಬೇಡಿ

March 20, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?