ಮೈಸೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಖಾದಿರ್ ಶಾಹಿದ್ ಪ್ರತಿಕ್ರಿಯೆ ನೀಡಿದರು. ಅ.16ಕ್ಕೆ ಮುಂದಿನ ನಡೆ ತಿಳಿಸುತ್ತೇವೆ. ಭಾರತೀಯ ಜನತಾ ಪಕ್ಷದೊಂದಿಗಿನ ಜೆಡಿಎಸ್ ಮೈತ್ರಿ ನಮಗೆ ಇಷ್ಟವಿಲ್ಲ. ಈಗಾಗಲೇ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ. ಮೊನ್ನೆ ಬಿಡದಿಯಲ್ಲಿ ಹೆಚ್ಡಿಕೆ ಕರೆದಿದ್ದ ಸಭೆಗೆ ಪ್ರಮುಖರು ಹೋಗಿಲ್ಲ. ಕೋಮುವಾದಿ ಬಿಜೆಪಿ ಜೊತೆ ಸೇರಿ ಅಧಿಕಾರ ಮಾಡುವ ಆಸೆ ನಮಗಿಲ್ಲ. ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರಕ್ಕೆ ಸಿ.ಎಂ.ಇಬ್ರಾಹಿಂ ವಿರೋಧವಿದೆ. ಯಾವುದೇ ಕಾರಣಕ್ಕೂ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಲ್ಲ. ಅ.16ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಭೆ ಕರೆದಿದ್ದಾರೆ. ಅ.16ರ ಸಭೆಯ ಬಳಿಕ ನಮ್ಮ ಮುಂದಿನ ನಡೆ ಬಗ್ಗೆ ತಿಳಿಸುತ್ತೇವೆ ಎಂದರು.
