PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ
ಚಾಮರಾಜನಗರಮುಖಪುಟ

ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ

Prathinidhi News
Last updated: May 6, 2024 10:31 am
Prathinidhi News
Published May 6, 2024
Share
SHARE

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಸುಮಾರು 1,250 ಎಕರೆ ಪ್ರದೇಶದ ಬಾಳೆ ತೋಟ ನಾಶವಾಗಿರುವುದು ತಿಳಿದುಬಂದಿದೆ. 900ಕ್ಕೂ ಹೆಚ್ಚು ರೈತರು 25 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿರುವ ಬಗ್ಗೆ ಅಂದಾಜಿಸಲಾಗಿದೆ. ಉತ್ತಮ ಬೆಲೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ರೈತರು ಮುಂದಿನ ವಾರದಲ್ಲಿ ಬೆಳೆ ತೆಗೆಯಲು ನಿರ್ಧರಿಸಿದ್ದರು. ಇದೀಗ ತೋಟಗಳು ಸಂಪೂರ್ಣ ಹಾಳಾಗಿರುವುದರಿಂದ ಕಂಗೆಟ್ಟಿದ್ದಾರೆ. ಪಪ್ಪಾಯಿ ಬೆಳೆಗಾರರು ಕೂಡ ಮಳೆಯ ಆರ್ಭಟಕ್ಕೆ ನಷ್ಟ ಅನುಭವಿಸಿದ್ದಾರೆ.

Contents
ಎಕರೆಗೆ ಕನಿಷ್ಠ 2 ಲಕ್ಷ ರೂ. ನಷ್ಟಶೀಘ್ರ ಪರಿಹಾರದ ಭರವಸೆ

ಜಿಲ್ಲೆಯಲ್ಲಿ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು ಮತ್ತು ಹನೂರು ತಾಲೂಕುಗಳಲ್ಲಿ ಸುಮಾರು 700 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಗುಂಡ್ಲುಪೇಟೆ ತಾಲೂಕಿನಲ್ಲಿ ಹೆಚ್ಚು ಹಾನಿಯಾಗಿದೆ.

ಎಕರೆಗೆ ಕನಿಷ್ಠ 2 ಲಕ್ಷ ರೂ. ನಷ್ಟ

ತೋಟಗಾರಿಕಾ ಇಲಾಖೆಯು ಬೆಳೆ ನಷ್ಟದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು, ಕ್ಷೇತ್ರ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರ ಮೂಲಕ ಇನ್ನೂ ವರದಿಗಳನ್ನು ಸಂಗ್ರಹಿಸುತ್ತಿದೆ. ಒಂದು ವಾರದಲ್ಲಿ ವಿವರವಾದ ವರದಿಯನ್ನು ನೀಡಲಾಗುವುದು ಎಂದು ಇಲಾಖೆ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ರೈತರೊಂದಿಗೆ ಸಮನ್ವಯ ಸಾಧಿಸಿ ಆದಷ್ಟು ಬೇಗ ದತ್ತಾಂಶ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರಿಂದ ಬೆಳೆ ನಷ್ಟ ಅನುಭವಿಸಿದವರಿಗೆ ಶೀಘ್ರ ಪರಿಹಾರ ವಿತರಣೆ ಮಾಡಬಹುದಾಗಿದೆ. ರೈತರು ಎಕರೆಗೆ ಕನಿಷ್ಠ 2 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ ಎಂದು ತೋಟಗಾರಿಕಾ ಇಲಾಖೆಯ ಮೂಲಗಳು ತಿಳಿಸಿವೆ.

ಶೀಘ್ರ ಪರಿಹಾರದ ಭರವಸೆ

ನೀರಾವರಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆಯಾಗದಿದ್ದರೂ, ರೈತರು ಬಂಪರ್ ಬೆಳೆಯನ್ನು ಬೆಳೆದಿದ್ದರು. ಇದೀಗ ಗಾಳಿ ಮಳೆ ಅವರ ಬೆಳೆಯನ್ನು ನಾಶ ಮಾಡಿದೆ. ಬೆಳೆ ನಷ್ಟಕ್ಕೆ ಸಂಬಂಧಿಸಿದ ವರದಿ ಸಿದ್ಧವಾದ ನಂತರ ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಗಳ ಪ್ರಕಾರ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭರವಸೆ ನೀಡಿದ್ದಾರೆ.

- ಜಾಹೀರಾತು -

ಮೈಸೂರು ತಾಲೂಕಿನ ಕತ್ತೂರು ಹಾಗೂ ಇತರೆಡೆ ಗಾಳಿ ಮಳೆಯಿಂದಾಗಿ ಬಾಳೆ ತೋಟಗಳು ನಾಶವಾಗಿವೆ. ಕಲ್ಲಂಗಡಿ ಬೆಳೆಗೂ ಹಾನಿಯಾಗಿದೆ.

ಶುಕ್ರವಾರ ಸಂಜೆ ಸುರಿದ ಭಾರಿ ಗಾಳಿ ಮಳೆಯಿಂದ ಚಾಮರಾಜನಗರದ ಹಲವೆಡೆ ಮತ್ತು ಮೈಸೂರಿನಲ್ಲಿ ಭಾರಿ ಹಾನಿ ಸಂಭವಿಸಿತ್ತು. ಮೈಸೂರು ನಗರದಲ್ಲಿ ಅನೇಕ ಮರಗಳು ಧರಾಶಾಯಿಯಾಗಿ ಸಂಚಾರಕ್ಕೆ ಅಡಚಣೆಯಾಗಿತ್ತು. ನಗರದ ಬಸ್ ನಿಲ್ದಾಣ ಪ್ರದೇಶಲ್ಲಿ ಅನೇಕ ಮರಗಳು ಧರೆಗುರುಳಿದ್ದವು. ಹೆಬ್ಬಾಳ, ದಟ್ಟಗಳ್ಳಿ, ಲಿಂಗಾಂಬುಧಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆ ಸಂಬಂಧಿತ ಹಾನಿಯಾಗಿತ್ತು. ಹಲವೆಡೆ ವಿದ್ಯುತ್ ಕಂಬಗಳೂ ನೆಲಕ್ಕುರುಳಿದ್ದವು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೀಡೆಮುಖಪುಟ

2024-25ನೇ ಸಾಲಿನ ಟೀಮ್ ಇಂಡಿಯಾ ಕ್ರಿಕೆಟಿಗರ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ..!

April 21, 2025
ಚುನಾವಣೆಮಂಡ್ಯಮುಖಪುಟರಾಜಕೀಯ

ಯೋಗೇಶ್ವರ್‌ ಬಂದಿರುವುದರಿಂದ ಕಾಂಗ್ರೆಸ್‌ ಗೆ ಬಲ ಬಂದಿದೆ: ಮಾಜಿ ಸಚಿವ HM ರೇವಣ್ಣ

October 25, 2024
ಮುಖಪುಟಮೈಸೂರು ನಗರ

ದೀಪಾವಳಿ “ದಿವಾಳಿ”ಯಾಗದಿರಲಿ ಕನ್ನಡ ಪದಬಳಕೆ ಸರಿಯಿರಲಿ : ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ

October 20, 2025
ಚಾಮರಾಜನಗರ

ಬಿಎಸ್ಪಿ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ

April 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?