ಮೈಸೂರು: ತಡರಾತ್ರಿ ನಗರದ ಯಾದವಗಿರಿ ಸಮೀಪ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣರಾಗಿದ್ದಾರೆ. ಗೋಕುಲಂ ನಿವಾಸಿಗಳಾದ ಸಿದ್ದರಾಜು (20), ನಿರಂಜನ್(20) ಮೃತದುರ್ದೈವಿಗಳು. ಬೈಕ್ನಲ್ಲಿದ್ದ ಮತ್ತೋರ್ವನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://www.prathinidhi.net/wp-content/uploads/2023/11/1179679-accident-5-1.webp)