PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಳೆರಾಯನಿಗಾಗಿ ಕಪ್ಪೆ ಮೆರವಣಿಗೆ; ಹೆಚ್.ಡಿ.ಕೋಟೆಯಲ್ಲಿ ವಿಭಿನ್ನ ಆಚರಣೆಯ ಮೂಲಕ ಮಳೆಗಾಗಿ ಪ್ರಾರ್ಥಿಸಿದ ಗ್ರಾಮಸ್ಥರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಳೆರಾಯನಿಗಾಗಿ ಕಪ್ಪೆ ಮೆರವಣಿಗೆ; ಹೆಚ್.ಡಿ.ಕೋಟೆಯಲ್ಲಿ ವಿಭಿನ್ನ ಆಚರಣೆಯ ಮೂಲಕ ಮಳೆಗಾಗಿ ಪ್ರಾರ್ಥಿಸಿದ ಗ್ರಾಮಸ್ಥರು
ಮುಖಪುಟಮೈಸೂರು ಗ್ರಾಮಾಂತರ

ಮಳೆರಾಯನಿಗಾಗಿ ಕಪ್ಪೆ ಮೆರವಣಿಗೆ; ಹೆಚ್.ಡಿ.ಕೋಟೆಯಲ್ಲಿ ವಿಭಿನ್ನ ಆಚರಣೆಯ ಮೂಲಕ ಮಳೆಗಾಗಿ ಪ್ರಾರ್ಥಿಸಿದ ಗ್ರಾಮಸ್ಥರು

Prathinidhi News
Last updated: June 30, 2026 2:35 pm
Prathinidhi News
Published June 30, 2026
Share
SHARE

ಹೆಚ್.ಡಿ.ಕೋಟೆ, ಜೂನ್ 30, 2026: ಜೂನ್ ತಿಂಗಳು ಅಂತ್ಯವಾಗುತ್ತಿದ್ದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಜನರು ಮಳೆಗಾಗಿ ವಿವಿಧ ರೀತಿಯ ಆಚರಣೆಗಳ ಮೊರೆ ಹೋಗುತ್ತಿದ್ದಾರೆ. ಅದರ ಭಾಗವಾಗಿ ಹೆಚ್.ಡಿ.ಕೋಟೆ ತಾಲೂಕಿನ ತುಂಬಸೋಗೆ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ಸಂಪ್ರದಾಯಬದ್ಧವಾಗಿ ಕಪ್ಪೆ ಮೆರವಣಿಗೆ ನಡೆಸಿ ಮಳೆಗಾಗಿ ಪ್ರಾರ್ಥಿಸಿದರು.

ಗ್ರಾಮದ ತೋಟದ ಬಾವಿಯಿಂದ ಕಪ್ಪೆಯನ್ನು ತಂದು ಒನಕೆಯ ಮೇಲೆ ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಕಪ್ಪೆಗೆ ಸ್ನಾನ ಮಾಡಿಸಿ ಅರಿಶಿನ–ಕುಂಕುಮ ಹಚ್ಚಿ ಪೂಜಿಸಲಾಯಿತು. ಸಂಪ್ರದಾಯದಂತೆ ಮಕ್ಕಳು ಮೈಗೆ ಸೊಪ್ಪು ಕಟ್ಟಿಕೊಂಡು, “ಉಯ್ಯೋ ಉಯ್ಯೋ ಮಳೆರಾಯ, ಹೂವಿನ ತೋಟಕ್ಕೆ ನೀರಿಲ್ಲ” ಎಂದು ಹಾಡುತ್ತಾ ತಮಟೆ ಬಾರಿಸಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಪ್ಪೆ ಮೆರವಣಿಗೆ ನಡೆಸಿದರು.
ಬಳಿಕ ಗ್ರಾಮದ ಅಧಿದೇವತೆ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಉತ್ತಮ ಮಳೆಯಾಗಿ ರೈತರ ಬದುಕು ಸುಧಾರಿಸಲಿ ಎಂದು ಪ್ರಾರ್ಥಿಸಿದರು. ಗ್ರಾಮಸ್ಥರು ಸಂಗ್ರಹಿಸಿದ ದವಸ-ಧಾನ್ಯಗಳಿಂದ ಅಡುಗೆ ತಯಾರಿಸಿ ಅನ್ನಸಂತರ್ಪಣೆಯನ್ನೂ ಏರ್ಪಡಿಸಿದರು.

ಮೈಸೂರು ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬರದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉತ್ತಮ ಮಳೆಯಾಗಲಿ ಎಂಬ ಆಶಯದೊಂದಿಗೆ ಗ್ರಾಮಸ್ಥರು ಈ ಸಂಪ್ರದಾಯವನ್ನು ಆಚರಿಸಿರುವುದು ಗಮನಾರ್ಹವಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಹಾಸನ

ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದು ಪತ್ನಿಯನ್ನು ಕೊಲೆಗೈದ ಪತಿರಾಯ !

January 13, 2026
ಮುಖಪುಟಮೈಸೂರು ಗ್ರಾಮಾಂತರರಾಜಕೀಯಸನ್ನಿಧಾನ

ಹೊಸರಾಮನಹಳ್ಳಿಯಲ್ಲಿ ಶ್ರೀ ಈರಣ್ಣೇಶ್ವರ ಹಬ್ಬದ ಸಂಭ್ರಮ: ಶಾಸಕ ಜಿ.ಡಿ. ಹರೀಶ್ ಗೌಡರಿಂದ ಪೂಜೆ ಸಲ್ಲಿಕೆ

January 12, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್

December 29, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಉಪಟಳ ನೀಡುತ್ತಿದ್ದ ತಾಯಿ ಹುಲಿ ಮತ್ತು ಮೂರು ಮರಿಗಳ ಸೆರೆ!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?