ಪೊನ್ನಂಪೇಟೆ : ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರಭಾವಿ ಮತದಾರಗಳನ್ನು ಭೇಟಿ ಮಾಡುವ ಮೂಲಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಲಾಯಿತು.
ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ನೇತೃತ್ವದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚದ ಪ್ರಧಾನ ಕಾರ್ಯದರ್ಶಿ ಡಾ ಬಿ. ಸಿ. ನವೀನ್ ಒಳಗೊಂಡ ಪದಾಧಿಕಾರಿಗಳ ತಂಡ, ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿರುವ ಪ್ರಭಾವಿ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮನವಿ ಮಾಡಲಾಯಿತು.
ಮಠಾಧೀಶರು, ಆಶ್ರಮದ ಸ್ವಾಮೀಜಿಗಳು, ವಿವಿಧ ಧಾರ್ಮಿಕ ಕೇಂದ್ರದ ಮುಖ್ಯಸ್ಥರು, ನಿವೃತ್ತ ಸೇನಾಧಿಕಾರಿಗಳು, ವೈದ್ಯರು, ವಿಜ್ಞಾನಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕರು- ಉಪನ್ಯಾಸಕರು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟುಗಳು, ವಿವಿಧ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರು, ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿ ನಿವೃತ್ತಿಯಾದ ಅಧಿಕಾರಿಗಳು, ವಿವಿಧ ಸೇವಾ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಮಾಜದಲ್ಲಿ ಗೌರವದಿಂದ ಗುರುತಿಸಿಕೊಂಡ ಗಣ್ಯರನ್ನು ಖುದ್ದಾಗಿ ಭೇಟಿ ಮಾಡುತ್ತಿರುವ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಬಿಜೆಪಿಯನ್ನು ಬೆಂಬಲಿಸುವಂತೆ ಮತಯಾಚಿಸಲಾಯಿತು.
ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಮುಖ್ಯಸ್ಥ ಪರಹಿತ ನಂದಾ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮತಯಾಚಿಸಿತು.
ರೈತ ಮೋರ್ಚಾದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ಮಾತನಾಡಿದರು.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಚೋಡುಮಾಡ ದಿನೇಶ್, ಕಾರ್ಯದರ್ಶಿ ಆಲೆಮಾಡ ಸುಧೀರ್, ವಿರಾಜಪೇಟೆ ಮಂಡಲ ಅಧ್ಯಕ್ಷ ಗುಡ್ಡಮಾಡ ಅಪ್ಪಿ ಸುಬ್ರಮಣಿ, ಪದಾಧಿಕಾರಿಗಳಾದ ಕಾಕಮಾಡ ಆದರ್ಶ್, ಆಲೆಮಾಡ ತಿಮ್ಮಯ್ಯ, ಕಿರಿಯಮಾಡ ಮಿಲನ್, ಅಳಮೆಂಗಡ ಸೋಮಯ್ಯ ಇದ್ದರು.
ಫೋಟೋ 23 ಜಿಕೆಪಿ 02 ; ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಮುಖ್ಯಸ್ಥರನ್ನು ಭೇಟಿ ಮಾಡಲಾಯಿತು.