PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ
ಚುನಾವಣೆಮುಖಪುಟ

ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ

Prathinidhi News
Last updated: June 3, 2024 9:36 am
Prathinidhi News
Published June 3, 2024
Share
SHARE

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದಿದ್ದು, ನಾಳೆ ಫಲಿತಾಂಶ ಹೊರಬರಲಿದೆ. ಇದರ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

Contents
ಈಶಾನ್ಯ ಪದವೀಧರರ ಕ್ಷೇತ್ರನೈಋತ್ಯ ಪದವೀಧರರ ಕ್ಷೇತ್ರಬೆಂಗಳೂರು ಪದವೀಧರರ ಕ್ಷೇತ್ರಆಗ್ನೇಯ ಶಿಕ್ಷಕರ ಕ್ಷೇತ್ರನೈಋತ್ಯ ಶಿಕ್ಷಕರ ಕ್ಷೇತ್ರದಕ್ಷಿಣ ಶಿಕ್ಷಕರ ಕ್ಷೇತ್ರಮೇಲ್ಮನೆಗೆ 7 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ಬಿಜೆಪಿ 3 ಸ್ಥಾನಕ್ಕೆ ಟಿಕೆಟ್ ಘೋಷಣೆ; ಸಿ.ಟಿ ರವಿಗೆ ಮಣೆ

ಈಶಾನ್ಯ ಪದವೀಧರರ ಕ್ಷೇತ್ರ

ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದಾರೆ.

ನೈಋತ್ಯ ಪದವೀಧರರ ಕ್ಷೇತ್ರ

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆಯನೂರು ಮಂಜುನಾಥ್ ಹಾಗೂ ಭಾರತೀಯ ಜನತಾ ಪಕ್ಷದಿಂದ ಧನಂಜಯ ಸರ್ಜಿ ಸ್ಪರ್ಧಿಸಿದ್ದಾರೆ.

ಬೆಂಗಳೂರು ಪದವೀಧರರ ಕ್ಷೇತ್ರ

ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಭಾರತೀಯ ಜನತಾ ಪಕ್ಷದಿಂದ ಅ.ದೇವೇಗೌಡ ಕಣದಲ್ಲಿದ್ದಾರೆ.

- ಜಾಹೀರಾತು -

ಆಗ್ನೇಯ ಶಿಕ್ಷಕರ ಕ್ಷೇತ್ರ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರ

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ಸ್ಪರ್ಧಿಸಿದ್ದು, ಕಾಂಗ್ರೆಸ್​​​​​ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್​ನಿಂದ ಎಸ್ಎಲ್ ಭೋಜೇಗೌಡ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಮರಿತಿಬ್ಬೇಗೌಡ ಹಾಗೂ JDS​ನಿಂದ ವಿವೇಕಾನಂದ ಸ್ಪರ್ಧಿಸಿದ್ದಾರೆ.

ಮೇಲ್ಮನೆಗೆ 7 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

ಇದೇ ಜೂನ್ 13ರಂದು ವಿಧಾನಸಭೆಯಿಂದ ಪರಿಷತ್‌ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನ ಘೋಷಿಸಿವೆ. ಕಾಂಗ್ರೆಸ್‌ಗೆ 7 ಸ್ಥಾನ ಗೆಲ್ಲುವ ಅವಕಾಶವಿದ್ದು, ಅಳೆದು ತೂಗಿ ಫೈನಲ್ ಪಟ್ಟಿ ಪ್ರಕಟಿಸಿದೆ.

ತಂದೆ ಸಿದ್ದರಾಮಯ್ಯಗೆ ವರುಣ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರಗೆ ಮೇಲ್ಮನೆ ಟಿಕೆಟ್ ಸಿಕ್ಕಿದೆ. ಹಾಗೆಯೇ ಸಚಿವರಾಗಿರೋ ಕಾರಣಕ್ಕೆ ಮತ್ತು ಹೈಕಮಾಂಡ್‌ಗೆ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡಿರೋ ಎನ್.ಎಸ್.ಬೋಸರಾಜುಗೆ ಮಣೆ ಹಾಕಲಾಗಿದೆ. ರಾಯಚೂರು ನಾಯಕರ ವಿರೋಧದ ನಡುವೆ ಬೋಸರಾಜು ಮರು ಆಯ್ಕೆಯಾಗಲಿದ್ದಾರೆ. ಇನ್ನೂ ಮೂರನೇ ಬಾರಿಗೆ ಆಯ್ಕೆಯಾಗ್ತಿರೋ ಡಾ. ಕೆ ಗೋವಿಂದ ರಾಜುಗೆ ಟಿಕೆಟ್ ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ ಕುಮಾರ್, ಜಗದೇವ್ ಗುತ್ತೇದಾರ್, ಅಲ್ಪಸಂಖ್ಯಾತ ಕೋಟಾದಡಿ ಐವಾನ್ ಡಿಸೋಜಾ, ಶಿವಮೊಗ್ಗದ ಮಾಜಿ ಜಿಪಂ ಅಧ್ಯಕ್ಷೆ ಬಿಲ್ಕಿಸ್ ಬಾನೋಗೆ ಚಾನ್ಸ್ ಸಿಕ್ಕಿದೆ. ಇದರ ಜೊತೆಗೆ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರೋ ಪರಿಷತ್ ಉಪ ಚುನಾವಣೆ ನಡೆಯಲಿದ್ದು, ಬಸನಗೌಡ ಬಾದರ್ಲಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ 3 ಸ್ಥಾನಕ್ಕೆ ಟಿಕೆಟ್ ಘೋಷಣೆ; ಸಿ.ಟಿ ರವಿಗೆ ಮಣೆ

ಪರಿಷತ್‌ನಲ್ಲಿ ಬಿಜೆಪಿಗೆ ಮೂರು ಸ್ಥಾನ ಗೆಲ್ಲೋ ಅವಕಾಶವಿದ್ದು, ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದೆ. ಒಕ್ಕಲಿಗ ಸಮುದಾಯದ ಸಿಟಿ ರವಿ ಮತ್ತು ಪರಿಷತ್ ಸದಸ್ಯರಾಗಿರೋ ಗಂಗಾ ಮತಸ್ಥ ಸಮುದಾಯದ ಎನ್ ರವಿಕುಮಾರ್‌ಗೆ ಮತ್ತೊಂದು ಅವಕಾಶ ನೀಡಲಾಗಿದೆ. ಹಾಗೆಯೇ ಮರಾಠಾ ಸಮುದಾಯದ ಎಂ.ಬಿ ಮುಳೆಗೆ ಟಿಕೆಟ್ ನೀಡಲಾಗಿದೆ.

ಇಂದು ಮತ್ತು ಜೂನ್ 13ರಂದು ನಡೆಯೋ ಪರಿಷತ್ ಚುನಾವಣೆಯಲ್ಲಿ ಗೆದ್ದು, ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಮೂರು ಪಕ್ಷಗಳ ರಣತಂತ್ರ ಭರ್ಜರಿಯಾಗಿಯೇ ನಡೆಯುತ್ತಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಚಿರನಿದ್ರೆಗೆ ಜಾರಿದ ಮಾಜಿ ಪ್ರಧಾನಿ ಮನ್‌ ಮೋಹನ್‌ ಸಿಂಗ್- ಗಣ್ಯರಿಂದ ಸಂತಾಪ

December 27, 2024
ಚುನಾವಣೆಮುಖಪುಟಮೈಸೂರು ನಗರರಾಜಕೀಯ

PODCAST :ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಚಾರ

March 20, 2024
ಮುಖಪುಟ

ಪ್ರವಾಸಕ್ಕೆಂದು ಬಂದಿದ್ದ ತಮಿಳುನಾಡಿನ ಇಬ್ಬರು ವಿದ್ಯಾರ್ಥಿನಿಯರು ಗೋಕರ್ಣದಲ್ಲಿ ಸಮುದ್ರ ಪಾಲು…!

April 25, 2025
ಬೆಂಗಳೂರುಮುಖಪುಟರಾಜಕೀಯ

ಪ್ರಜ್ವಲ್ ರೇವಣ್ಣ ಅಶ್ಲೀಲ‌ ವಿಡಿಯೋ ಕೇಸ್: 3 ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ ದೇವರಾಜೇಗೌಡ

May 11, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?