PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಿರಿಯ ನಾಗರಿಕರು, ವಿಶೇಷಚೇತನರಿಗೆ ಮನೆಯಿಂದ ಮತದಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಹಿರಿಯ ನಾಗರಿಕರು, ವಿಶೇಷಚೇತನರಿಗೆ ಮನೆಯಿಂದ ಮತದಾನ
ಸಮಗ್ರ

ಹಿರಿಯ ನಾಗರಿಕರು, ವಿಶೇಷಚೇತನರಿಗೆ ಮನೆಯಿಂದ ಮತದಾನ

ಪ್ರತಿನಿಧಿ
Last updated: April 12, 2024 7:09 pm
ಪ್ರತಿನಿಧಿ
Published April 11, 2024
Share
SHARE

ಚಿಕ್ಕಬಳ್ಳಾಪುರ : 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅರ್ಹ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆಯು ಏಪ್ರಿಲ್ 13 ರಿಂದ 18 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ  ತಿಳಿಸಿದರು.
ಜಿಲ್ಲಾಡಳಿತ ಭವನದÈÉ ನಡೆದ ಮನೆ ಮತದಾನಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷಚೇತನರಿಗೆ ಮನೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಈ ಸಂಬಂಧ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಮನೆ ಮತದಾನ ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸಲು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಮತದಾನಕ್ಕೆ ಬೇಕಾದ ಎಲ್ಲಾ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ವಯ ನಿಗದಿತ ಕಾಲಾವಧಿಯಲ್ಲಿ ಯಾವುದೇ ಲೋಪಕ್ಕೆ ಅವಕಾಶ ಕೊಡದೆ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇದಕ್ಕೆ ಸಹಕಾರಿಯಾಗುವಂತೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯಲ್ಲಿ ಯಾವುದೇ ಗೊಂದಲಗಳಿದ್ದರೂ ಪರಿಹರಿಸಿಕೊಳ್ಳಬಹುದು. ಕೂಲಂಕಷವಾಗಿ ತರಬೇತುದಾರರು ನೀಡುವ ಮಾಹಿತಿಗಳನ್ನು ಸರಿಯಾಗಿ ಗ್ರಹಿಸಿ ಅದರಂತೆ ತಮ್ಮ ಕಾರ್ಯ ಕ್ಷೇತ್ರದಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು
ಮತದಾನದ ಅವಧಿಯಲ್ಲಿ ಸೆಕ್ಟರ್ ಅಧಿಕಾರಿಗಳು, ಮೈಕ್ರೋ ಅಬ್ಸರ್ವರ್ ಗಳು, ಮತದಾನ ಕಾರ್ಯಕ್ಕೆ ನಿಯೋಜಿತರಾಗಿರುವ ಇನ್ನಿತರ ಅಧಿಕಾರಿಗಳ ಪಾತ್ರವೇನು? ಎಂಬುದನ್ನು ಅರಿತುಕೊಳ್ಳಬೇಕು. ರಹಸ್ಯ ಮತದಾನ ನಡೆಯಲು ಪೂರಕವಾಗಿರುವ ವ್ಯವಸ್ಥೆ ಕಲ್ಪಿಸಬೇಕು ಎಂದು
ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ, ಮನೆ ಮತದಾನ ಪ್ರಕ್ರಿಯೆಯ ಪೂರ್ಣ ಉಸ್ತುವಾರಿಯನ್ನು ಸೆಕ್ಟರ್ ಅಧಿಕಾರಿಗಳು ನಿರ್ವಹಿಸಬೇಕಿದೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳಿಂದ ಮತದಾನ ಸಾಮಗ್ರಿಗಳನ್ನು ಪಡೆದು ಅಗತ್ಯ ಸಿಬ್ಬಂದಿಯೊಂದಿಗೆ ರೂಟ್ ಮ್ಯಾಪ್ ಪ್ರಕಾರ ಮತದಾನ ನಿರ್ವಹಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕಿದೆ. ಹೀಗಾಗಿ ಸೆಕ್ಟರ್ ಅಧಿಕಾರಿಗಳ ಹೊಣೆಗಾರಿಕೆ ಮಹತ್ತರವಾಗಿದೆ ಎಂದರು.
ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರವಾರು ಮನೆಯಿಂದಲೇ ಮತದಾನಕ್ಕೆ ಮಾಡಲು ಒಪ್ಪಿಗೆ ನೀಡಿರುವ ಅರ್ಹ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ, ವಿಶೇಷ ಚೇತನರ ಮತದಾರರ ಪಟ್ಟಿ ಮಾಡಲಾಗಿದೆ. ಅದರಂತೆ ಮತದಾರರ ವಾಸ ವಿಳಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ನಿರ್ವಹಣೆ ಮಾಡಬೇಕೆಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು.
ಚುನಾವಣಾ ಆಯೋಗದ ರಾಜ್ಯ ಮಟ್ಟದ ಸಂಪನ್ಮೂಲ ತರಬೇತುದಾರ ಶಂಕರ್ ರೆಡ್ಡಿ ಅವರು ಮನೆ ಮತದಾನದ ಚುನಾವಣಾ ಪ್ರಕ್ರಿಯೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಣೆ ಮಾಡಬೇಕಿರುವ ಕಾರ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಪಿ.ಪಿ.ಟಿ ಮೂಲಕ ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆಯಿಂದಲೇ ಮತದಾನ ಮಾಡಲು 85 ವರ್ಷ ಮೇಲ್ಪಟ್ಟ 1639 ಹಿರಿಯ ನಾಗರಿಕರು, 763 ವಿಶೇಷಚೇತನರು ಒಪ್ಪಿಗೆ ಸೂಚಿಸಿ ನೋಂದಾಯಿಸಿಕೊಂಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ದಲಿತರ ಮತಬ್ಯಾಂಕ್ ಗಾಗಿ ಕಾಂಗ್ರೆಸ್ ಓಲೈಕೆ

April 1, 2024
ಸಮಗ್ರ

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಜೆಡಿಎಸ್ ಪಕ್ಷಕ್ಕೆ ವಿದಾಯ

April 1, 2024
ಬೆಂಗಳೂರುಮುಖಪುಟರಾಜಕೀಯಸಮಗ್ರ

ರಾಜಕೀಯಕ್ಕಾಗಿ ಸುಳ್ಳು ಹೇಳುವುದು ಸಿಎಂಗೆ ಶೋಭೆ ತರಲ್ಲ: ಜಿಟಿ ದೇವೇಗೌಡ

May 2, 2024
ಸಮಗ್ರ

ಮೋದಿ ಉದ್ಯಮಿಗಳ ಪರ, ನಾವು ಬಡವರ ಪರ

April 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?