PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜಿಟಿಡಿ ಸ್ವಕ್ಷೇತ್ರದಲ್ಲಿ ಯತೀಂದ್ರ ಮತಬೇಟೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ನಗರ > ಜಿಟಿಡಿ ಸ್ವಕ್ಷೇತ್ರದಲ್ಲಿ ಯತೀಂದ್ರ ಮತಬೇಟೆ
ಮೈಸೂರು ನಗರ

ಜಿಟಿಡಿ ಸ್ವಕ್ಷೇತ್ರದಲ್ಲಿ ಯತೀಂದ್ರ ಮತಬೇಟೆ

ಪ್ರತಿನಿಧಿ
Last updated: April 5, 2024 5:36 pm
ಪ್ರತಿನಿಧಿ
Published April 5, 2024
Share
SHARE

– ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರ
– ಕಮಿಷನ್‌ ದಂಧೆ ಆರೋಪಕ್ಕೆ ಟಾಂಗ್‌ ನೀಡಿದ ಮಾಜಿ ಶಾಸಕ

ಪ್ರತಿನಿಧಿ ವರದಿ ಮೈಸೂರು
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಭರ್ಜರಿ ರಣತಂತ್ರ ರೂಪಿಸಿರುವ ಕಾಂಗ್ರೆಸ್‌ ನಾಯಕರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತಬೇಟೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡರ ನಡುವಿನ ಮಾತಿನ ಸಮರದ ಬೆನ್ನಲ್ಲೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಎಂಟ್ರಿಕೊಟ್ಟು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಪರವಾಗಿ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದರು. ಶಾಸಕ ಜಿ.ಟಿ. ದೇವೇಗೌಡ ಅವರ ಸ್ವಕ್ಷೇತ್ರವಾಗಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ‌ ಜಿಟಿಡಿ ಏನು‌ ಕೆಲಸ ಮಾಡಿಲ್ಲ ಅಂತ‌ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ, ವರುಣಾ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಎಂದು ಪಂಥಾಹ್ವಾನ ನೀಡಿದ್ದರು.

ಈ ಇಬ್ಬರ ಟಾಕ್ ವಾರ್‌ನಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹೈವೋಲ್ಟೇಜ್‌ ಕ್ಷೇತ್ರವಾಗಿ ಪರಿಣಮಿಸಿದೆ. ಹೀಗಾಗಿ ಪ್ರತಿಷ್ಠೆಯ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌, ಅಖಾಡಕ್ಕಿಳಿಯುವ ಮೂಲಕ ಮತಬೇಟೆ ಆರಂಭಿಸಿದೆ. ತಂದೆಯ ಬೆನ್ನಿಗೆ ನಿಂತಿರುವ ಯತೀಂದ್ರ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಹಲವು ಕಡೆಗಳಲ್ಲಿ ಶುಕ್ರವಾರ ಭರ್ಜರಿ ಪ್ರಚಾರ ನಡೆಸುವ ಮೂಲಕ ಸ್ಥಳೀಯ ಶಾಸಕ ಜಿ.ಟಿ. ದೇವೇಗೌಡ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

- ಜಾಹೀರಾತು -

ಸಾಕ್ಷಿಯೊಂದಿಗೆ ಆರೋಪಿಸಿ: 
ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ವಿರುದ್ಧ ಮಾಡಿರುವ ಕಮಿಷನ್‌ ದಂಧೆ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಇವು ಸಾಕ್ಷಿ, ಆಧಾರವಿಲ್ಲದ ಆರೋಪಗಳಾಗಿವೆ. ನಾನು ಕೂಡ ಅವರ ವಿರುದ್ಧ ಆರೋಪ ಮಾಡಬಹುದು. ಶಾಸಕರಾದಾಗಿನಿಂದ ಅವರು 80% ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು  ಹೇಳಬಹುದು. ಸಹಕಾರಿ ಕ್ಷೇತ್ರದಲ್ಲಿ ಕೋಟ್ಯಾಂತರ ಅವ್ಯವಹಾರ ಮಾಡಿದ್ದಾರೆ ಅಂತ ಜನ ಹೇಳುತ್ತಾರೆ. ಆದರೆ ಅದಕ್ಕೆಲ್ಲ ಸಾಕ್ಷ್ಯಾಧಾರ ಬೇಕಿದ್ದು, ಸುಮ್ಮನೆ ಆರೋಪ ಮಾಡಬಾರದು ಎಂದರು.

ಅಲ್ಲದೇ ಜಿ.ಟಿ. ದೇವೇಗೌಡರಿಗೆ ತಂದೆಯವರ ವಿರುದ್ಧ ನೇರವಾಗಿ ಆರೋಪ ಮಾಡಲು ಆಗುತ್ತಿಲ್ಲ. ನಾನು ರಾಜಕೀಯದಲ್ಲಿರುವ ಕಾರಣ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಆರೋಪ ಮಾಡಿದರೆ ಪರೋಕ್ಷವಾಗಿ ತಂದೆ‌ಯ ಮೇಲೆ ಮಾಡಿದಂತಾಗಲಿದೆ ಎಂಬುದು ಅವರ ಲೆಕ್ಕಾಚಾರ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ಪಕ್ಷದವರೇ ವಿಜಯೇಂದ್ರ ಅವರ ವಿರುದ್ಧ ಮಾತನಾಡಿದ್ದರು. ಹೀಗಾಗಿ ವರ್ಗಾವಣೆ ದಂಧೆ ಆರೋಪಗಳಿಗೆಲ್ಲಾ ನಾನು ಈಗಾಗಲೇ ಉತ್ತರಿಸಿದ್ದು, ಇವೆಲ್ಲವೂ ಹುರುಳಿದ ಆರೋಪಗಳಾಗಿವೆ ಎಂದು ಟೀಕಿಸಿದರು.
====================
ಬಾಕ್ಸ್‌
ಎಂ.ಲಕ್ಷ್ಮಣ್‌ ಬಿರುಸಿನ ಮತಯಾಚನೆ 
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌, ಶುಕ್ರವಾರ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿದ ಅವರು, ಸ್ಥಳೀಯ ವ್ಯಾಪಾರಿಗಳಿಗೆ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಣಾಳಿಕೆ ನೀಡುವ ಮೂಲಕ ಮತ ಯಾಚನೆ ಮಾಡಿದರು. ಅಲ್ಲದೇ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿನಂತಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಮತ್ತಿತರರು ಇದ್ದರು. ಬಳಿಕ ಸಂಜೆ ನಗರದ ಚಾಮರಾಜ ಕ್ಷೇತ್ರ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರ ಬೆಂಬಲದೊಂದಿಗೆ ಮತ ಪ್ರಚಾರ ನಡೆಸಿದರು. ಅಲ್ಲದೇ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್‌ ಅವರ ಜನ್ಮದಿನದ ಹಿನ್ನೆಲೆಯಲ್ಲಿ ನಗರದ ರೈಲ್ವೆ ನಿಲ್ದಾಣ ವೃತ್ತದಲ್ಲಿರುವ ಬಾಬುಜೀ ಅವರ ಪ್ರತಿಮೆಗೆ ಎಂ.ಲಕ್ಷ್ಮಣ್‌ ಅವರು ಮಾಲಾರ್ಪಣೆ ಮಾಡಿದರು.
====================

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !

November 10, 2025
ಮುಖಪುಟಮೈಸೂರು ನಗರ

ಸೆಸ್ಕ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

November 26, 2024
ಮುಖಪುಟಮುಡಾ ಹಗರಣಮೈಸೂರು ನಗರರಾಜಕೀಯ

ಮುಡಾ ಹಗರಣ: A2 ಆರೋಪಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಗೌಪ್ಯ ವಿಚಾರಣೆ

October 25, 2024
ಚುನಾವಣೆಮುಖಪುಟಮೈಸೂರು ನಗರ

ರಾಜಕೀಯದಿಂದ ನಾನೀಗ ನಿವೃತ್ತನಾಗಿರುವುದರಿಂದ ಚುನಾವಣೆಯಲ್ಲಿ ಸಹಕರಿಸುವಂತೆ ಸಿದ್ದರಾಮಯ್ಯ ಕೋರಿದರು: ವಿ ಶ್ರೀನಿವಾಸ್ ಪ್ರಸಾದ್

April 13, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?