ಬೆಂಗಳೂರು, ಜನವರಿ 9, 2026 : ಮೈಕೊರೆಯುವ ರಣಚಳಿಗೆ ಕರುನಾಡಿನ ಜನರು ತತ್ತರಿಸಿಹೋಗಿದ್ದು, ಶೀತಗಾಳಿಯ ಭೀಕರತೆ ಹೆಚ್ಚಾಗಿದೆ.ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ನಡುವೆ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆ ಕೂಡ ಇದೆ.
ಹಾಗೆಯೇ ದಾವಣಗೆರೆ, ಹಾವೇರಿ,ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದ್ದು, ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಎಚ್ಚರಿಕೆಯಿಂದ ಇರುವಂತೆ ಕಠಿಣ ಸೂಚನೆ ಹೊರಡಿಸಲಾಗಿದೆ.
ಇನ್ನುಳಿದಂತೆ ಜ. 10 ಹಾಗೂ 11 ರಂದು ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
